ಶರಣರ ವಚನಗಳನ್ನು ಕಲಿತು ಇತರರಿಗೆ ಪ್ರೇರಣೆ ನೀಡಿ: ಮಹಾಂತ ಸ್ವಾಮೀಜಿ

KannadaprabhaNewsNetwork |  
Published : Jun 02, 2025, 12:53 AM IST
ಭದ್ರಾವತಿ ನಗರದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಹಾಗು ಬಸವಾಭಿಮಾನಿಗಳ ಸಹಕಾರದೊಂದಿಗೆ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಏರ್ಪಡಿಸಿದ್ದ ವಿಶ್ವ ಗುರು ಬಸವಣ್ಣನವರ ಜಯಂತ್ಯೋತ್ಸವ ಸಮಾರಂಭ ಕುವೆಂಪು ವಿಶ್ವ ವಿದ್ಯಾಲಯದ  ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ, ತಿಪ್ಪಾಯಿಕೊಪ್ಪದ ಶ್ರೀಗುರು ಮೂಕಪ್ಪ ಶಿವಯೋಗಿಗಳ ಮಠದ ಶ್ರೀ ಮ.ನಿ.ಪ್ರ. ಮಹಾಂತಸ್ವಾಮೀಜಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. | Kannada Prabha

ಸಾರಾಂಶ

ಈ ನಾಡಿನ ಪ್ರತಿಯೊಬ್ಬರು ಶರಣರ ಬದುಕಿನ ಪರಿಕಲ್ಪನೆಯನ್ನು ಅರ್ಥಮಾಡಿಕೊಳ್ಳುವ ಜತೆಗೆ ಅವರ ವಚನಗಳನ್ನು ಕಲಿತು ಇತರರಿಗೆ ಪ್ರೇರೇಪಿಸಬೇಕೆಂದು ತಿಪ್ಪಾಯಿಕೊಪ್ಪದ ಶ್ರೀಗುರು ಮೂಕಪ್ಪ ಶಿವಯೋಗಿಗಳ ಮಠದ ಮಹಾಂತ ಸ್ವಾಮೀಜಿಯವರು ಹೇಳಿದರು.

ಬಸವಣ್ಣ ಜಯಂತಿ । ಶರಣ ಸಾಹಿತ್ಯ ಪರಿಷತ್‌ ಆಯೋಜನೆ । ೧೦೮ ಗಾಯಕರಿಂದ ಸಾಮೂಹಿ ವಚನ ಗಾಯನ

ಕನ್ನಡಪ್ರಭ ವಾರ್ತೆ ಭದ್ರಾವತಿ

ಈ ನಾಡಿನ ಪ್ರತಿಯೊಬ್ಬರು ಶರಣರ ಬದುಕಿನ ಪರಿಕಲ್ಪನೆಯನ್ನು ಅರ್ಥಮಾಡಿಕೊಳ್ಳುವ ಜತೆಗೆ ಅವರ ವಚನಗಳನ್ನು ಕಲಿತು ಇತರರಿಗೆ ಪ್ರೇರೇಪಿಸಬೇಕೆಂದು ತಿಪ್ಪಾಯಿಕೊಪ್ಪದ ಶ್ರೀಗುರು ಮೂಕಪ್ಪ ಶಿವಯೋಗಿಗಳ ಮಠದ ಮಹಾಂತ ಸ್ವಾಮೀಜಿಯವರು ಹೇಳಿದರು.

ನಗರದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಹಾಗೂ ಬಸವಾಭಿಮಾನಿಗಳ ಸಹಕಾರದೊಂದಿಗೆ ಶ್ರೀ ಬಸವೇಶ್ವರ ಸಭಾಭವನದಲ್ಲಿ ಏರ್ಪಡಿಸಿದ್ದ ವಿಶ್ವ ಗುರು ಬಸವಣ್ಣನವರ ಜಯಂತ್ಯುತ್ಸವ ಸಮಾರಂಭದ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿದರು.

ಗುಡಿಗುಂಡಾರಗಳನ್ನು ವಿರೋಧಿಸಿದ ಬಸವಣ್ಣನವರು ಇಷ್ಟಲಿಂಗದ ಪರಿಕಲ್ಪನೆಯನ್ನು ನೀಡಿ ದೇಹವನ್ನೇ ದೇಗುಲವನ್ನಾಗಿಸಿದರು. ಇಂತಹ ಶರಣ ಧರ್ಮ ಪರಂಪರೆಯನ್ನು ಉಳಿಸಿಕೊಳ್ಳಬೇಕು. ಶರಣರ ವಚನಗಳು ಪ್ರತಿಯೊಬ್ಬರಿಗೂ ದಾರಿ ದೀಪಗಳಾಗಿವೆ. ನಾವುಗಳೇ ವಚನಗಳನ್ನು ಕಲಿತು ಪಾಲಿಸದಿದ್ದರೆ ಬೇರೆ ಯಾರು ಕಲಿಯುತ್ತಾರೆಂದು ಪ್ರಶ್ನಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ಮಾತನಾಡಿ, ಬಸವಣ್ಣನವರನ್ನು ಯಾವುದೇ ಧರ್ಮ, ಜಾತಿಯ ಹಿನ್ನಲೆಯಲ್ಲಿ ಕಾಣುವುದಿಲ್ಲ. ಎಲ್ಲಾ ಜಾತಿ-ಜನಾಂಗಕ್ಕೂ ಸಮಾನತೆ ಬೋಧಿಸಿ ಸಮಾಜದಲ್ಲಿ ನಾವು ಹೇಗೆ ವರ್ತಿಸಬೇಕು, ಹೇಗೆ ಬದುಕಬೇಕು ಎಂಬುದರ ಬಗ್ಗೆ ತಮ್ಮ ವಚನಗಳ ಮೂಲಕ ಸಮಾಜಕ್ಕೆ ತಿಳಿಸಿಕೊಟ್ಟ ಮಹಾನ್ ದಾರ್ಶನಿಕ ಎಂದರು.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಸಂಘರ್ಷ ಉಂಟಾಗಿ ಆಶಾಂತಿ ತಾಂಡವಾಡುತ್ತಿದೆ. ಇದರಿಂದ ಸಮಾಜದಲ್ಲಿ ಸಾಮರಸ್ಯ ಇಲ್ಲದೆ ಜೀವನ ನಲುಗುತ್ತಿದೆ. ಬಸವಣ್ಣನವರು ಸಮಾಜದಲ್ಲಿನ ತಳ ಸಮುದಾಯಗಳ ಬಗ್ಗೆ, ಅವರ ನೋವು, ಸಂಕಟಗಳ ಬಗ್ಗೆ ಅರಿತಷ್ಟು ಅಂಬೇಡ್ಕರ್‌ ಹೊರತು ಪಡಿಸಿದರೆ ಬೇರೆ ಯಾರೂ ಅರಿಯಲಿಲ್ಲ ಎಂದರು.

ಹೊನ್ನಾವರ ಕವಲಕ್ಕಿಯ ಡಾ.ಎಚ್.ಎಸ್ ಅನುಪಮ ಮಾತನಾಡಿ, ವಚನಗಳು ಪಠ್ಯಗಳಲ್ಲ ಅಚರಣಾ ತತ್ವಗಳು. ಇದನ್ನು ಮನೆಯಲ್ಲಿ ಪ್ರತಿ ದಿನ ಓದಿ ಮನನ ಮಾಡಿಕೊಳ್ಳುವ ಮೂಲಕ ನಮ್ಮನ್ನು ನಾವು ಅವಲೋಕನ ಮಾಡಿಕೊಳ್ಳಬೇಕು. ಇಲ್ಲದಿದ್ದೆರ ವಚನಗಳು ಸಹ ಮಂತ್ರಗಳ ಪಟ್ಟಿಗೆ ಸೇರಿಕೊಳ್ಳುತ್ತವೆ ಎಂದು ಎಚ್ಚರಿಸಿದರು.

ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನಯ್ಯ. ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

ಟಿ.ಜೆ. ನಾಗರತ್ನ ಗಾಯನ ಸಾರಥ್ಯದಲ್ಲಿ ನಗರದ ೧೦೮ ಗಾಯಕರಿಂದ ಹಾಡಿದ ಸಾಮೂಹಿಕ ವಚನ ಗಾಯನ ಸಮಾರಂಭದ ವಿಶೇಷ ಆಕರ್ಷಣೆಯಾಗಿ ಕಂಡು ಬಂದಿತು.

ಮಹಿಳಾ ಸದಸ್ಯೆಯರು ವಚನ ಗಾಯನ ಮಾಡಿದರು. ಶಂಕರ ಮೂರ್ತಿ ಸ್ವಾಗತಿಸಿದರು. ಎಚ್.ಎನ್.ಮಹಾರುದ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಿರಣ್ ಅತಿಥಿ ಪರಿಚಯ ನಡೆಸಿ ಕೊಟ್ಟರು. ನಂದಿನಿ ಮಲ್ಲಿಕಾರ್ಜುನ್ ಕಾರ್ಯಕ್ರಮ ನಿರೂಪಿಸಿ, ಕತ್ತಲಗೆರೆ ತಿಮ್ಮಪ್ಪ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ