ವಿಚಲಿತಗೊಳ್ಳುವ ಆಕರ್ಷಣೆ ಮೀರಿ ಕಲಿಕೆ ಅಗತ್ಯ: ಕಡೆಕಾರು

KannadaprabhaNewsNetwork |  
Published : Sep 09, 2026, 02:45 AM IST
ಮುರಲಿ ಕಡೇಕಾರ್‌ ಅವರನ್ನು ಸನ್ಮಾನಿಸುತ್ತಿರುವುದು | Kannada Prabha

ಸಾರಾಂಶ

ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳ ಮನಸ್ಸನ್ನು ವಿಚಲಿತಗೊಳಿಸುವ, ದಾರಿ ತಪ್ಪಿಸುವ ಹತ್ತಾರು ಆಕರ್ಷಣೆಗಳಿವೆ. ಇವೆಲ್ಲವನ್ನೂ ಮೀರಿ ಬೆಳೆಯುವ ಮನೋಭಾವ ನಿಮ್ಮದಾಗಬೇಕು. ಯಾರು ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಾರೋ ಅವರ ವಿದ್ಯಾರ್ಥಿ ಜೀವನ ಖಂಡಿತವಾಗಿಯೂ ಸಫಲವಾಗುತ್ತದೆ ಎಂದು ನಿವೃತ್ತ ಶಿಕ್ಷಕ, ಉಡುಪಿ ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿ ಮುರಲಿ ಕಡೇಕಾರ್‌ ಹೇಳಿದ್ದಾರೆ.

ಕುಂದಾಪುರ: ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳ ಮನಸ್ಸನ್ನು ವಿಚಲಿತಗೊಳಿಸುವ, ದಾರಿ ತಪ್ಪಿಸುವ ಹತ್ತಾರು ಆಕರ್ಷಣೆಗಳಿವೆ. ಇವೆಲ್ಲವನ್ನೂ ಮೀರಿ ಬೆಳೆಯುವ ಮನೋಭಾವ ನಿಮ್ಮದಾಗಬೇಕು. ಯಾರು ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಾರೋ ಅವರ ವಿದ್ಯಾರ್ಥಿ ಜೀವನ ಖಂಡಿತವಾಗಿಯೂ ಸಫಲವಾಗುತ್ತದೆ ಎಂದು ನಿವೃತ್ತ ಶಿಕ್ಷಕ, ಉಡುಪಿ ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿ ಮುರಲಿ ಕಡೇಕಾರ್‌ ಹೇಳಿದ್ದಾರೆ.

ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ನ ಸುಜ್ಞಾನ ಪದವಿಪೂರ್ವ ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಗ್ಲೋಬಲ್ ಸ್ಕೂಲ್ ಜಂಟಿ ಆಶ್ರಯದಲ್ಲಿ 2026ನೇ ಸಾಲಿನ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಗೌರವ ಗುರುವಂದನೆ ಸ್ವೀಕರಿಸಿ ಅವರು ಮಾತನಾಡಿದರು.ನಿಜವಾದ ಶಿಕ್ಷಣವು ನಮಗೆ ಸಂಸ್ಕಾರವನ್ನು ನೀಡಬೇಕು. ಯಾರೋ ಸಿನಿಮಾ ನಟರನ್ನೋ, ಕ್ರಿಕೆಟ್ ಆಟಗಾರರನ್ನೋ ರೋಲ್ ಮಾಡೆಲ್ ಮಾಡಿಕೊಳ್ಳುವ ಬದಲು, ನಿಮಗಾಗಿ ಜೀವ ತೇಯುವ ಹೆತ್ತವರನ್ನು ಹಾಗೂ ಸರಿ-ದಾರಿ ತೋರುವ ಶಿಕ್ಷಕರನ್ನು ನಿಮ್ಮ ಆದರ್ಶವಾಗಿಟ್ಟುಕೊಳ್ಳಿ ಎಂದರು.

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಮಾತನಾಡಿ, ಜೀವನಕ್ಕೊಂದು ಸ್ಪಷ್ಟ ಹಾಗೂ ಉನ್ನತ ಗುರಿ ಅತ್ಯಗತ್ಯ. ನಮ್ಮ ಸಾಂಸ್ಕೃತಿಕ ಬೇರುಗಳು, ಆಚಾರ-ವಿಚಾರಗಳು ಮತ್ತು ಪರಂಪರೆಯನ್ನು ಅರ್ಥೈಸಿಕೊಂಡು ಬದುಕುವುದು ಪ್ರತಿಯೊಬ್ಬ ನಾಗರಿಕನ ಧರ್ಮ ಎಂದರು.ಸಂಸ್ಥೆಯ ಅಧ್ಯಕ್ಷ ರಮೇಶ್‌ ಶೆಟ್ಟಿ ಮಾತನಾಡಿ, ಒಳ್ಳೆಯ ಕೆಲಸ ಮತ್ತು ಸಾಧನೆಯನ್ನು ಈ ಸಮಾಜ ಎಂದಿಗೂ ಗುರುತಿಸುತ್ತದೆ ಎಂಬುದರ ಅರಿವು ವಿದ್ಯಾರ್ಥಿಗಳಿಗಾಗಬೇಕು ಎಂಬುದು ನಮ್ಮ ಉದ್ದೇಶ ಎಂದರು.ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ ಮಾತನಾಡಿ, ಶಿಕ್ಷಕರು ನೀಡುವ ಬುದ್ಧಿಮಾತುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದರು.ಸಂಸ್ಥೆಯ ಖಜಾಂಚಿ ಭರತ್‌ ಶೆಟ್ಟಿ ಮಾತನಾಡಿ, ನಿಮ್ಮ ಶಿಕ್ಷಣಕ್ಕಾಗಿ ಹೆತ್ತವರು ಪಡುತ್ತಿರುವ ಶ್ರಮ ಹಾಗೂ ಮಾಡುತ್ತಿರುವ ತ್ಯಾಗವನ್ನು ಎಂದಿಗೂ ಮರೆಯಬೇಡಿ ಎಂದರು.

ಶಾಲಾ-ಕಾಲೇಜಿನಲ್ಲಿ ಸುದೀರ್ಘ ಹಾಗೂ ಶ್ರೇಷ್ಠ ಸೇವೆ ಸಲ್ಲಿಸಿದ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಪ್ರೀತಿ ಚಂದ್ರಶೇಖರ ಹಾಗೂ ಸುಜ್ಞಾನ ಪಿಯು ಕಾಲೇಜಿನ ಉಪನ್ಯಾಸಕಿ ಚರಿಷ್ಮಾ ಅವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.

ಸುಜ್ಞಾನ ನ್ಯಾಷನಲ್‌ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರಕಾಶ್‌ ಆಚಾರ್ಯ, ವಿದ್ಯಾರಣ್ಯ ಗ್ಲೋಬಲ್‌ ಸ್ಕೂಲ್‌ನ ಪ್ರಾಂಶುಪಾಲ ಅನಿತಾ ಕುಮಾರಿ, ಮುಖ್ಯೋಪಾಧ್ಯಾಯ ಸ್ಪೂರ್ತಿ ಎ. ಮತ್ತಿತರರಿದ್ದರು.ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲ ರಂಜನ್‌ ಬಿ. ಶೆಟ್ಟಿ ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕ ರಜತ್‌ ಭಟ್‌ ನಿರೂಪಿಸಿದರು. ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್‌ ಕುಮಾರ್‌ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತ್ ಜೋಡೋದಿಂದ ಹೊಸ ಅವಕಾಶ ಸೃಷ್ಟಿ: ಸೊರಕೆ
ಭಾರತೀಯ ಅಧ್ಯಾತ್ಮ ನೈಜ ಜಾತ್ಯತೀತವಾದ: ಪೇಜಾವರ ಶ್ರೀ