ಮಕ್ಕಳ ಕಲಿಕೆ ಪ್ರದರ್ಶನಕ್ಕೆ ಕಲಿಕಾ ಹಬ್ಬ ವೇದಿಕೆ: ಬಿಇಒ ನಾಣಿಕಿ ನಾಯ್ಕ

KannadaprabhaNewsNetwork |  
Published : Feb 16, 2026, 02:30 AM IST
ಪೊಟೋ-ಸಮೀಪದ ಶಿಗ್ಲಿ ಗ್ರಾಮದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಬಿಇಓ ನಾಣಕಿ ನಾಯಕ್ ಉದ್ಘಾಟಿಸಿ ಮಾತನಾಡಿದರು.  | Kannada Prabha

ಸಾರಾಂಶ

ಪ್ರತಿ ಮಗುವೂ ಗಳಿಸಲೇಬೇಕಾದ ಕನಿಷ್ಠ ಕಲಿಕಾ ಫಲಗಳನ್ನು ಸಾಧಿಸುವುದು ಮುಖ್ಯ ಗುರಿ. ಆ ಗುರಿ ತಲುಪುವಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.

ಲಕ್ಷ್ಮೇಶ್ವರ: ಕಲಿಕೆಯಲ್ಲಿ ನಿಧಾನಗತಿ ಇರುವ ಮಕ್ಕಳಿಗೆ ಶೈಕ್ಷಣಿಕ ವರ್ಷದುದ್ದಕ್ಕೂ ವಿಶೇಷ ವಿಧಾನ ಬಳಸಿ ಬುನಾದಿ, ಸಾಕ್ಷರತೆ ಮತ್ತು ಸಂಖ್ಯೆ ಜ್ಞಾನದ ಕಲಿಕಾ ಫಲಗಳನ್ನು ಸಾಧಿಸಲಾಗುತ್ತದೆ. ಕಲಿಕೆಯ ಸಾಧನೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಮತ್ತು ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವೇ ಈ ಕಲಿಕಾ ಹಬ್ಬ ಎಂದು ಬಿಇಒ ನಾಣಿಕಿ ನಾಯ್ಕ ಹೇಳಿದರು.

ಸಮೀಪದ ಶಿಗ್ಲಿಯಲ್ಲಿ ಗುರುವಾರ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರತಿ ಮಗುವೂ ಗಳಿಸಲೇಬೇಕಾದ ಕನಿಷ್ಠ ಕಲಿಕಾ ಫಲಗಳನ್ನು ಸಾಧಿಸುವುದು ಮುಖ್ಯ ಗುರಿ. ಆ ಗುರಿ ತಲುಪುವಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಯಾವುದೇ ಮಗು ಕಲಿಕೆಯಲ್ಲಿ ಹಿಂದುಳಿಯದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಶಿಗ್ಲಿ ಕ್ಲಸ್ಟರಿನ 8 ಸರ್ಕಾರಿ ಶಾಲೆಗಳ ಸುಮಾರು 100 ಮಕ್ಕಳು ಕಲಿಕಾ ಹಬ್ಬದಲ್ಲಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಏಳು ವಲಯ(ಸ್ಪರ್ಧೆ)ಗಳಲ್ಲಿ 1 ರಿಂದ 5 ನೇ ತರಗತಿ ಮಕ್ಕಳು ಭಾಗವಹಿಸಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪುರ ಮಾತನಾಡಿ, ಶಿಗ್ಲಿ ಸಮೂಹದ ಕಲಿಕಾ ಹಬ್ಬವನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ವಿಜೃಂಭಣೆಯಿಂದ ಸಂಘಟಿಸಲಾಗಿದೆ. ಸಮೂಹದ ಎಲ್ಲ ಶಿಕ್ಷಕರ ಉತ್ಸಾಹ ಮತ್ತು ಸೃಜನಶೀಲತೆ ಮೆಚ್ಚುವಂತದ್ದು ಎಂದು ಹೇಳಿದರು.

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರು ನೇಕಾರ ಮಾತನಾಡಿ, ನಿಷ್ಪಕ್ಷಪಾತವಾಗಿ ಮಕ್ಕಳ ಕಲಿಕೆಯನ್ನು ಮೌಲ್ಯಮಾಪನ ಮಾಡಲು ಬೇರೆ ಕ್ಲಸ್ಟರ್ ಶಿಕ್ಷಕರು ನಿರ್ಣಾಯಕರಾಗಿ ಭಾಗವಹಿಸಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಗ್ಲಿ ಕ್ಲಸ್ಟರ್ ಸಿಆರ್‌ಪಿ ಜ್ಯೋತಿ ಗಾಯಕವಾಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಸಿ. ದೇವಾಂಗಮಠ ನಿರೂಪಿಸಿದರು. ಪ್ರಧಾನ ಶಿಕ್ಷಕ ಜಿ.ಬಿ. ರಾಮಗೇರಿ ಸ್ವಾಗತಿಸಿದರು. ಡಿ.ಬಿ. ಪಾಟೀಲ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಂಪಿ ಉತ್ಸವದಲ್ಲಿ ರಕ್ತರಾತ್ರಿ ನಾಟಕ ಪ್ರದರ್ಶನ
ಯುವ ಕವಿಗೋಷ್ಠಿ: ಹಿರಿಯರ ಮಾನ ಉಳಿಸಿದ ಯುವ ಕವಿಗಳು