ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರಿದ್ದು, ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಶತಸಿದ್ದ. ಸ್ಥಳೀಯ ನಾಯಕರು ಸ್ವಪ್ರತಿಷ್ಠೆ ಹಾಗೂ ವೈಮನಸ್ಯ ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಅಹಂ ಬದಿಗಿಟ್ಟು ಕೆಲಸ ಮಾಡಿ:
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷಕ್ಕೆ ಹೊಸ ಚೈತನ್ಯ ತುಂಬಲಾಗುತ್ತಿದೆ. 2028ಕ್ಕೆ ಶಾಸಕ ಅಭ್ಯರ್ಥಿಗಳು ಯಾರಾಗಬೇಕು ಎನ್ನುವುದನ್ನು ಪಕ್ಷದ ಹಿರಿಯರು ತೀರ್ಮಾನಿಸುತ್ತಾರೆ. ಆದರೆ, ಈಗಿನಿಂದಲೇ ಎಲ್ಲರು ಒಗ್ಗಟ್ಟಿನಿಂದ ನಡೆದರೆ ಮಾತ್ರ ಪಕ್ಷಕ್ಕೆ ಹಾಗೂ ಎಲ್ಲರಿಗೂ ಒಳ್ಳೆಯದಾಗಲಿದೆ. ಹಾಗಾಗಿ ಮುಖಂಡರು ತಮ್ಮಲ್ಲಿನ ಅಹಂ ಬಿದಿಗಿಟ್ಟು ಕೆಲಸ ಮಾಡಿದರೆ ಮಾತ್ರ ಸೂಕ್ತ ಪ್ರತಿಫಲ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಯುವ ಸಮುದಾಯ ನಿರ್ಣಾಯಕ:
ರಾಜ್ಯ ಸರ್ಕಾರದ ವೈಫಲ್ಯ ಜನರ ಮುಂದಿಡಿ:
ವಿದ್ಯಾವಂತ ಯುವ ಸಮುದಾಯಕ್ಕೆ ಉದ್ಯೋಗಗಳೆ ದೊರೆಯದಾಗಿವೆ. ಸರ್ಕಾರ ಕಾಟಾಚಾರಕ್ಕೆ ಉದ್ಯೋಗ ಮೇಳ ನಡೆಸುವ ಮೂಲಕ ವಿದ್ಯಾವಂತರನ್ನು ವಂಚಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಕಿತ್ತು ಹಾಕದೇ ಇದ್ದರೆ ಯುವ ಸಮುದಾಯಕ್ಕೆ ಉದ್ಯೋಗ ದೊರೆಯಲು ಸಾಧ್ಯವೇ ಇಲ್ಲ. ಕೇಂದ್ರೆ ಹಾಗೂ ರಾಜ್ಯ ಸರ್ಕಾರಗಳ ಸಾಧನೆಯನ್ನು ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಕಾರ್ಯಕರ್ತರು ಜನರ ಮುಂದಿಡಬೇಕು ಎಂದು ವಿವರಿಸಿದರು.
ಜೆಡಿಎಸ್ ರಾಜ್ಯ ಕೋರ್ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ಮಾತನಾಡಿ, ತಾಲೂಕಿನಲ್ಲಿ ಹಲವಾರು ರೈತ ಕುಟುಂಬಗಳು ಹೈನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಇತ್ತೀಚೆಗೆ ಗ್ರಾಮಗಳಲ್ಲಿ ಹಸುಗಳ ಕಳವು ನಡೆಯುತ್ತಿದೆ. ಆದರೆ ಪೊಲೀಸರು ಮಾತ್ರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವುದಲ್ಲದೆ ಆತಂಕದಲ್ಲಿ ದಿನ ಕಳೆಯುವಂತಾಗಿದೆ. ರಾಜ್ಯ ಸರ್ಕಾರ ಸುಳ್ಳು ಭರವಸೆಗಳಿಂದ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.ಸಮಾವೇಶದಲ್ಲಿ ಶಾಸಕ ರವಿಕುಮಾರ್, ಮಾಜಿ ಶಾಸಕರಾದ ನಾರಾಯಣಸ್ವಾಮಿ, ಶ್ರೀನಿವಾಸಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೃಷ್ಣಪ್ಪ, ಚೌಡರೆಡ್ಡಿ, ರಮೇಶ್ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಚ್ ಜಿ.ವಿಜಯಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ.ಮಂಜುನಾಥ್, ಮಾಜಿ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಘಟಕದ ಅಧ್ಯಕ್ಷ ಎಸ್.ಎಂ.ಹರೀಶ್ ಗೌಡ, ಮುಖಂಡರಾದ ಎ.ನರಸಿಂಹಯ್ಯ, ಟಿ.ಗೋವಿಂದರಾಜು, ಟಿ.ಎನ್.ಪ್ರಭುದೇವ್, ಹುಸ್ಕೂರು ಆನಂದ್, ಅಂಜನೇಗೌಡ, ಎ.ಪಿ.ರಂಗನಾಥ್, ಜಿ.ಸತ್ಯನಾರಾಯಣ್ ಮತ್ತಿತರರಿದ್ದರು.
ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಬೆಂಬಲ:
ಈ ಕುರಿತು ಪ್ರತಿಕ್ರಿಯಿಸಿದ ನಿಖಿಲ್, ಜೆಡಿಎಸ್ ಎಂದಿಗೂ ರೈತರ ಪರವಾಗಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
9ಕೆಡಿಬಿಪಿ1-
ದೊಡ್ಡಬಳ್ಳಾಪುರದಲ್ಲಿ ನಡೆದ ಜೆಡಿಎಸ್ ರಜತ ಮಹೋತ್ಸವ ಸಮಾವೇಶದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.9ಕೆಡಿಬಿಪಿ2-
ದೊಡ್ಡಬಳ್ಳಾಪುರದಲ್ಲಿ ನಡೆದ ಜೆಡಿಎಸ್ ರಜತ ಮಹೋತ್ಸವ ಸಮಾವೇಶದಲ್ಲಿ ನೆರೆದಿರುವ ಜನಸ್ತೋಮ.9ಕೆಡಿಬಿಪಿ3-
ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರಿಗೆ ಸಂಭ್ರಮದ ಸ್ವಾಗತ ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಯಿತು.