ಗದಗ: ಹಿಂದೂ ಸಂಘಟನೆಯ ಕಾರ್ಯಕರ್ತ ಅನಿಲ ಮುಲ್ಲಾಳ ಮೇಲೆ ಹಲ್ಲೆ ಖಂಡಿಸಿ, ವಿಡಿಯೋದಲ್ಲಿ ಹಿಂದೂಗಳನ್ನು ಭಯ ಬೀಳಿಸುವ, ಕೋಮುಗಲಭೆ ಸೃಷ್ಟಿಸುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕ್ರಾಂತಿ ಸೇನಾ ಸಂಘಟನೆ ವತಿಯಿಂದ ನಗರದ ಟಾಂಗಾಕೂಟನಲ್ಲಿ ಪ್ರತಿಭಟನೆ ನಡೆಸಿ ಪಾದಯಾತ್ರೆ ಮೂಲಕ ಶಹರ ಪೊಲೀಸ್ ಠಾಣೆಗೆ ತೆರಳಿ ಸಿಪಿಐಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಗೌರವ ಕಾರ್ಯದರ್ಶಿ ಪ್ರವೀಣ ಹಬೀಬ ಮಾತನಾಡಿ, ಪ್ರಚೋದನಕಾರಿ ಹೇಳಿಕೆ ನೀಡಿರುವ ಮುಸ್ಲಿಂ ಯುವಕನ ವಿಡಿಯೋವನ್ನು ಸೂಕ್ತ ತನಿಖೆ ಮಾಡಿ ಎಲ್ಲರ ಮೇಲೂ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕೋಮುಗಲಭೆ ಸೃಷ್ಟಿಸುತ್ತಿರುವ ಮುಸ್ಲಿಂ ಗೂಂಡಾ ಗ್ಯಾಂಗ್ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಉಪಾಧ್ಯಕ್ಷ ಭೀಮಾ ಕಾಟಿಗಾರ್ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಶಿವಕುಮಾರ್ ಕುಂಬಾರ್, ಭರತ್ ಮಾರಪ್ಪನವರ, ಪವನ್ ಪುರದ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.