ಕನ್ನಡಪ್ರಭ ವಾರ್ತೆ ಉಡುಪಿ
ಅವರು ಶನಿವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ, ಕೃತಕ ನೆರೆ ಹಾವಳಿ-ಬೆಂಕಿ ದುರಂತ- ಭೂಕುಸಿತ ಬಗ್ಗೆ ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅತ್ಯಂತ ಹೆಚ್ಚು ಮಳೆಯಾಗುವ ಪಶ್ಚಿಮಘಟ್ಟಗಳಲ್ಲಿ ಮರಗಳ ನಾಶದಿಂದ ಮಳೆ ನೀರು ಭೂಮಿಯ ಒಳಗೆ ತುಂಬಾ ಸುಲಭವಾಗಿ ಪ್ರವೇಶಿಸುತ್ತಿದೆ. ಹೇರಳವಾಗಿ ಒಳಗಡೆ ಹೋದ ಈ ನೀರು ಹೊರಗಡೆ ಬರಲೇ ಬೇಕು. ಪಶ್ಚಿಮಘಟ್ಟಗಳ ರಚನೆಯಲ್ಲಿ ತುಂಬಾ ಸ್ತರಗಳಿವೆ. ಈ ಸ್ತರಭಂಗವಾದರೆ ಭೂಕಂಪ ಆಗುವ ಸಾಧ್ಯತೆ ಜಾಸ್ತಿ. ಇತ್ತೀಚಿನ ದಿನಗಳ ಮಳೆಗಾಲದಲ್ಲಿ ಪಶ್ಚಿಮಘಟ್ಟದ ಕೇಳುತ್ತಿರುವ ಸ್ಫೋಟದಂತಹ ಶಬ್ದಕ್ಕೆ ಈ ಸ್ತರಭಂಗವೇ ಕಾರಣ. ಅದರ ಜೊತೆಗೆ ಮಳೆಯ ನೀರು ಅಂತರ್ಜಲವಾಗಿ ಒತ್ತಡವನ್ನು ಕೊಡುತ್ತದೆ. ಆಗ ವಯನಾಡಿನಲ್ಲಿ ಆಗಿರುವಂತಹ ದುರಂತಗಳು ಸಂಭವಿಸುತ್ತವೆ ಎಂದವರು ಹೇಳಿದರು.ಭೂಮಿಯ ರಚನೆಯ ಅಧ್ಯಯನ ಮಾಡದೆ ರಸ್ತೆ ನಿರ್ಮಾಣಕ್ಕೆ ಗುಡ್ಡಗಳನ್ನು ಕೊರೆದ ಪರಿಣಾಮ ಅಂಕೋಲದ ಶಿರೂರಿನಲ್ಲಿ ಆಗಿರುವಂತಹ ದುರಂತಗಳು ಸಂಭವಿಸುತ್ತವೆ. ಭೂಮಿಯ ಮೇಲೆ ಇರುವ ಮುರಕಲ್ಲು ಬಹಳಷ್ಟು ಗಟ್ಟಿಮುಟ್ಟಾಗಿರುತ್ತದೆ. ಅದರ ಕೆಳಗಿನ ಪದರದಲ್ಲಿ ಇರುವುದು ಕೇವಲ ಜೇಡಿ ಮಣ್ಣು. ಇದು ಬಹಳಷ್ಟು ಅಪಾಯವಾಗಿದೆ. ಮಣಿಪಾಲದಲ್ಲಿಯೂ ಅವೈಜ್ಞಾನಿಕವಾಗಿ ಮುರಕಲ್ಲು ಕೊರೆಯಲಾಗುತ್ತದೆ. ಮಾನವ ನಿರ್ಮಿತ ಭೂಕುಸಿತಗಳು ಆಗದಂತೆ ತಡೆಯುವ ಕಾರ್ಯ ಮಾಡಬೇಕಾಗಿದೆ. ಅದಕ್ಕಾಗಿ ಸರ್ಕಾರ ಭೂಮಿಯನ್ನು ಕೊರೆಯಲು ಕಾನೂನಾತ್ಮಕವಾದ ನಿಯಮಗಳನ್ನು ಜಾರಿಗೆ ತರಬೇಕು ಎಂದು ಅವರು ಹೇಳಿದರು.
ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಜಿಲ್ಲಾ ಅಧಿಕಾರಿ ವಿನಾಯಕ ಉ.ಕಲ್ಗುಟಕರ ಮಾತನಾಡಿದರು.
ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಸ್ವಾಗತಿಸಿದರು. ಪತ್ರಿಕಾ ಭವನದ ಸಂಚಾಲಕ ಅಜಿತ್ ಆರಾಡಿ ವಂದಿಸಿದರು. ಪತ್ರಕರ್ತ ದೀಪಕ್ ಜೈನ್ ನಿರೂಪಿಸಿದರು.