ಕನ್ನಡಪ್ರಭ ವಾರ್ತೆ ಮಡಿಕೇರಿ
ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಸ್ವಸ್ಥ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಆರೈಕೆದಾರರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೆ.ಜಿ. ವಿಮಲಾ ಕಾರ್ಯಕ್ರಮದ ಆಶಯ ಮತ್ತು ಆರೈಕೆದಾರರ ಬಗ್ಗೆ ವಿಶ್ವ ಸಂಸ್ಥೆಯ ನಿಲುವು ವ್ಯಕ್ತಪಡಿಸಿದರು.ಸೋಮವಾರಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುದೋಳ ಅವರು ವಿಶೇಷಚೇತನರ ಪಾಲಕರ ಬವಣೆಗಳು ಮತ್ತು ಅವುಗಳ ಪರಿಹಾರ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು.
ಸುಂಟಿಕೊಪ್ಪದ ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ಗೌತಮ್ ಮೈನಿ ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಯೊಂದಿಗೆ ಸೇರ್ಪಡೆಗೊಳಿಸುವ ಆಶಯ ವ್ಯಕ್ತಪಡಿಸಿದರು.
ಸಾಮಾನ್ಯ ಶಾಲೆಗಳಲ್ಲಿ ಆಟಿಸಂ ಮಕ್ಕಳ ಏಕೀಕೃತ ಶಿಕ್ಷಣದ ಬಗ್ಗೆ ವನಿತಾ ಚೆಂಗಪ್ಪ, ಆಟಿಸಂ ಮಕ್ಕಳ ಜತೆಗಿನ ಅನುಭವಗಳ ಕುರಿತು ಮಂಜುಳಾ, ಫಿಸಿಯೋಥೆರಪಿಯ ಅನುಕೂಲಗಳ ಕುರಿತು ರಮಜೆ ಸಾಬ್ ನದಾಫ್, ವಿಶೇಷಚೇತನ ಮಕ್ಕಳ ದೃಶ್ಯಕಲೆ ಮತ್ತು ಕೌಶಲ್ಯ ತರಬೇತಿಯ ಕುರಿತು ರಾಮ್ ಗೌತಮ್ ಮಾಹಿತಿ ನೀಡಿದರು.