ಮಹಿಳೆಯರ ರಕ್ಷಣೆಗೆ ಕಾನೂನು ಅರಿವು ಮುಖ್ಯ: ಎಸ್ಪಿ ಅರಸಿದ್ಧಿ

KannadaprabhaNewsNetwork |  
Published : Mar 25, 2025, 12:47 AM IST
24ಕೆಪಿಎಲ್205 ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಕಾನೂನು ಅರಿವು ಕಾರ್ಯಾಗಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ಧಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಯುವಕರಿಗೂ ಸೂಕ್ಷ್ಮತೆ ಅಗತ್ಯ. ಸಾಮಾಜಿಕ ಮಾಧ್ಯಮಗಳನ್ನು ಸಕಾರಾತ್ಮಕ ಕಾರ್ಯಗಳಿಗೆ ಬಳಸಬೇಕು. ಮಹಿಳೆಯರು ಶೋಷಣೆಗೆ ಸಂಬಂಧಿಸಿದಂತೆ ಯಾರಿಗೂ ಹೆದರಬೇಕಿಲ್ಲ. ಮುಖ್ಯವಾಗಿ ಪೊಲೀಸರೆದುರು ಯಾವುದೇ ಮಾಹಿತಿ ಮುಚ್ಚಿಡಬಾರದು.

ಕೊಪ್ಪಳ:

ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದರೂ ಮಹಿಳಾ ಶೋಷಣೆಯ ಪ್ರಕರಣಗಳಿಗೆ ಇನ್ನೂ ಅಂಕುಶ ಬಿದ್ದಿಲ್ಲ. ಮಹಿಳೆಯರು ಸ್ವಯಂ ರಕ್ಷಣಾ ಕಲೆಗಳಿಗೆ ಆದ್ಯತೆ ನೀಡಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಕರೆ ನೀಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಮಹಿಳಾ ದಿನಾಚರಣೆ ಅಂಗವಾಗಿ ಕಾಲೇಜಿನ ಮಹಿಳಾ ಸಬಲೀಕರಣ ವಿಭಾಗ, ಮಹಿಳೆಯರ ಅನೈತಿಕ ಕಳ್ಳ ಸಾಗಾಣಿಕೆ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ವಾಣಿಜ್ಯ ಲೈಂಗಿಕ ಶೋಷಣೆ ತಡೆಗೆ ಸಂಬಂಧಿಸಿದಂತೆ ನಡೆದ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಯುವಕರಿಗೂ ಸೂಕ್ಷ್ಮತೆ ಅಗತ್ಯ. ಸಾಮಾಜಿಕ ಮಾಧ್ಯಮಗಳನ್ನು ಸಕಾರಾತ್ಮಕ ಕಾರ್ಯಗಳಿಗೆ ಬಳಸಬೇಕು. ಮಹಿಳೆಯರು ಶೋಷಣೆಗೆ ಸಂಬಂಧಿಸಿದಂತೆ ಯಾರಿಗೂ ಹೆದರಬೇಕಿಲ್ಲ. ಮುಖ್ಯವಾಗಿ ಪೊಲೀಸರೆದುರು ಯಾವುದೇ ಮಾಹಿತಿ ಮುಚ್ಚಿಡಬಾರದು ಎಂದ ಎಸ್ಪಿ, ಈಚೆಗೆ ಸಾಣಾಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣದ ನಿದರ್ಶನ ವಿವರಿಸಿದರು.

ಪ್ರಾಂಶುಪಾಲ ಡಾ. ಡಿ.ಎಚ್. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ಡಾ. ಭಾಗ್ಯಜ್ಯೋತಿ ಪ್ರಾಸ್ತಾವಿಕ ಮಾತನಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಹಾಂತಸ್ವಾಮಿ ಪೂಜಾರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ, ಡಾ. ಪ್ರಕಾಶ್ ಬಳ್ಳಾರಿ, ಡಾ. ವಿಪ್ಲವಿ, ಗೀತಾ ಜಿ, ಡಾ. ನಾಗರಾಜ ದೊರೆ, ಡಾ. ಬೋರೇಶ, ವೈ.ಬಿ. ಅಂಗಡಿ, ಮಾರುತಿ ತಳವಾರ, ಬಸವರಾಜ ಕರುಗಲ್, ವಸಂತಕುಮಾರ, ಅನ್ನಪೂರ್ಣ ಹಾಗೂ ವಿದ್ಯಾರ್ಥಿಗಳು ಇದ್ದರು.ವಿಜಯಲಕ್ಚ್ಮೀ ಕೆಂಗೇರಿ ಪ್ರಾರ್ಥಿಸಿದರು. ಡಾ. ಮಹಾಂತೇಶ ನೆಲಾಗಣಿ ನಿರೂಪಿಸಿದರು. ಡಾ. ತುಕಾರಾಮ ನಾಯ್ಕ ಸ್ವಾಗತಿಸಿದರು. ಜ್ಞಾನೇಶ್ವರ ಪತ್ತಾರ ವಂದಿಸಿದರು.ಉಪನ್ಯಾಸ ಮಾಲಿಕೆ

ಮಹಿಳೆಯರ ಸಬಲೀಕರಣ ಮತ್ತು ಮಹಿಳೆಯರಿಗಾಗಿ ಇರುವ ಸರ್ಕಾರಿ ಯೋಜನೆಗಳ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ, ಮಹಿಳೆಯರ ಲೈಂಗಿಕ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಶಿವಲೀಲಾ, ಅನೈತಿಕವಾಗಿ ಮಹಿಳೆಯರ ಕಳ್ಳ ಸಾಗಾಣಿಕೆ ತಡೆ ಹಾಗೂ ವಾಣಿಜ್ಯ ಲೈಂಗಿಕ ಶೋಷಣೆ ತಡೆ ಕುರಿತು ನ್ಯಾಯವಾದಿ ಹನುಮಂತರಾವ್ ಉಪನ್ಯಾಸ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ