ಅಸ್ಪೃಶ್ಯತೆ ನಿವಾರಣೆಗೆ ಕಾನೂನು ಅರಿವು ಅಗತ್ಯ

KannadaprabhaNewsNetwork |  
Published : Dec 02, 2024, 01:19 AM IST
ಸುದ್ದಿ ಚಿತ್ರ ೧: ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಎಸ್‌ಸಿ, ಎಸ್‌ಟಿ ದೌರ್ಜನ್ಯ ಹಾಗೂ ಅಸ್ಪೃಷ್ಯತೆ ನಿವಾರಣೆ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್ ಮಾತನಾಡಿದರು. ತಹಸೀಲ್ದಾರ್ ಬಿ.ಎನ್.ಸ್ವಾಮಿ. ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸ್, ಮತ್ತಿತರರು ಹಾಜರಿದ್ದರು | Kannada Prabha

ಸಾರಾಂಶ

ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮತದಾನ ಮಾಡುವ ಮೂಲಕ ದೇಶದ ಆಡಳಿತದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಆಶಯದಿಂದ ಮತದಾನದ ಹಕ್ಕು ನೀಡಲಾಗಿದೆ. ಆದರೆ ಹಲವರು ಅದೇ ಮತವನ್ನು ಹಣಕ್ಕೆ ಮಾರಿಕೊಂಡು ಡಾ.ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ನೀಡಿದ ಮತದಾನದ ಹಕ್ಕನ್ನು ನಾವು ದುರುಪಯೋಗ ಪಡಿಸಿಕೊಂಡ ಕಾರಣ ಇಂದು ದೇಶ ಬಲಾಢ್ಯರ (ಶ್ರೀಮಂತರ) ಕೈಯಲ್ಲಿ ಸಿಕ್ಕಿ ನಲುಗುತ್ತಿದೆ ಎಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್ ಹೇಳಿದರು.ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸಿದ್ದಾರ್ಥ ಸೇವಾ ಸಂಸ್ಥೆ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎಸ್ಸಿ, ಎಸ್ಟಿ ದೌರ್ಜನ್ಯ ಹಾಗು ಅಸ್ಪೃಷ್ಯತೆ ನಿವಾರಣೆ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.ಮತವನ್ನು ಮಾರಿಕೊಳ್ಳಬೇಡಿ

ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮತದಾನ ಮಾಡುವ ಮೂಲಕ ದೇಶದ ಆಡಳಿತದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಆಶಯದಿಂದ ಮತದಾನದ ಹಕ್ಕು ನೀಡಿದರೆ ನಾವುಗಳು ಅದೇ ಮತವನ್ನು ೫೦೦-೧೦೦೦ ಕ್ಕೆ ಮಾರಿಕೊಂಡು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದೇವೆ. ಇದರಿಂದ ದೇಶದ ಆಡಳಿತ ಚುಕ್ಕಾಣಿಯನ್ನು ಹಣವಂತರು ಅನುಭವಿಸುತ್ತಿದ್ದಾರೆ. ಕಾನೂನು ಅರಿವು ಅಗತ್ಯತಹಸೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ ಯಾರಿಗೆ ಕಾನೂನಿನ ಅರಿವಿರುತ್ತದೆಯೋ ಅಂತಹವರು ಯಾವುದೇ ಅನ್ಯಾಯಕ್ಕೆ ಒಳಗಾಗುವುದಿಲ್ಲ. ಕಾನೂನಿನ ಅರಿವಿಲ್ಲದವರು ಸದಾ ಅನ್ಯಾಯಗಳಿಗೆ ತುತ್ತಾಗುತ್ತಾರೆ. ಅನ್ಯಾಯ ಆದಾಗ ಅದನ್ನು ಪ್ರಶ್ನಿಸುವುದನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಂ.ವೇಣು, ಮುನಿವೆಂಕಟಸ್ವಾಮಿ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಜನರಲ್ಲಿ ನಾಯಕತ್ವ ಅರಿವಿಗೆ ಜೆಸಿಐ ಆದ್ಯತೆ
ಮೇಲುಕೋಟೆ: ಡಿ.21ರಿಂದ ಮೂರು ದಿನಗಳ ಕಾಲ ನಾಟಕೋತ್ಸವ