ಕನ್ನಡಪ್ರಭ ವಾರ್ತೆ, ಶಿಕಾರಿಪುರ
ಪಟ್ಟಣದ ಸುರಭಿ ಭವನದಲ್ಲಿ ರಾಜ್ಯ ಸಹಕಾರ ಮಹಾಮಂಡಲ, ಸಹಕಾರ ಯೂನಿಯನ್ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಹಾಗೂ ಶಿವಮೊಗ್ಗ ಸಹಕಾರ ಇಲಾಖೆ ಆಶ್ರಯದಲ್ಲಿ ನಡೆದ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕಾರ್ಯದರ್ಶಿಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರಿ ಸಂಘಗಳಲ್ಲಿನ ಕಾರ್ಯದರ್ಶಿ, ಸಿಬ್ಬಂದಿಗೆ ಸಹಕಾರ ಕಾಯ್ದೆ ಕಾನೂನು ತಿಳಿವಳಿಕೆ ಬಹಳ ಮುಖ್ಯವಾಗಿದೆ. ಇಂತಹ ತರಬೇತಿಗಳಲ್ಲಿ ಹೆಚ್ಚು ಮಾಹಿತಿಯನ್ನು ಪಡೆದು, ತಮ್ಮ ಸಹಕಾರ ಸಂಘಗಳಲ್ಲಿ ಅಳವಡಿಸಿಕೊಂಡು ಸಂಘದ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಬೇಕು ಎಂದರು.ಜಿಲ್ಲಾ ಸಹಕಾರ ಯೂನಿಯನ್ ವೃತ್ತಿಪರ ನಿರ್ದೇಶಕ ಎಂ.ನಾಗರಾಜಸ್ವಾಮಿ ಮಾತನಾಡಿ, ಜಿಲ್ಲಾ ಸಹಕಾರ ಯೂನಿಯನ್ ಶಿಕ್ಷಣ- ತರಬೇತಿ- ಪ್ರಚಾರ ನೀಡುವ ಸಂಸ್ಥೆಯಾಗಿದೆ. ಇಂತಹ ತರಬೇತಿಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವಿಕೆ ಮತ್ತು ಕಲಿಯುವಿಕೆ ಪ್ರಯೋಜನ ಪಡೆದು, ಅದನ್ನು ಕಾರ್ಯದರ್ಶಿಗಳು ನಿತ್ಯದ ವ್ಯವಹಾರದಲ್ಲಿ ಬಳಸಿಕೊಳ್ಳಬೇಕು. ಆ ಮೂಲಕ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಣ ಅಧಿಕಾರಿ ಎಚ್.ರಾಜು, ಯಶವಂತ್ ಕುಮಾರ್, ಲಲಿತಮ್ಮ, ಕೆ.ಸಿ. ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.
ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕಾರ್ಯದರ್ಶಿಗಳಿಗೆ ನಡೆದ ತರಬೇತಿ ಕಾರ್ಯಾಗಾರವನ್ನು ಶಿಮುಲ್ ನಿರ್ದೇಶಕ ಟಿ.ಶಿವಶಂಕರಪ್ಪ ಉದ್ಘಾಟಿಸಿದರು.