ಶಾಸಕರಿಗೆ ದಿನ ಭತ್ಯ ಬಗ್ಗೆ ಕಾನೂನು ಹೋರಾಟ: ಭೀಮಪ್ಪ ಗಡಾದ

KannadaprabhaNewsNetwork |  
Published : Dec 04, 2025, 03:15 AM IST
 ಸುದ್ದಿಗೋಷ್ಠಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಶಾಸಕರಿಗೆ ದಿನಭತ್ಯೆ ಇಲ್ಲವೇ ಊಟ- ಉಪಹಾರ ನೀಡಬೇಕು. ಹಾಗೇನಾದರೂ ಎರಡನ್ನೂ ನೀಡಿದರೆ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಹೀಗಾಗಿ, ಸಾರ್ವಜನಿಕರ ಪರವಾಗಿ ಈ ಬಗ್ಗೆ ಕಾನೂನಾತ್ಮಕ ಹೋರಾಟ ನಡೆಸಲಾಗುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು‌.

ಕನ್ನಡಪ್ರಭ ವಾರ್ತೆ ಬೆಳಗಾವಿ

ಚಳಿಗಾಲದ ಅಧಿವೇಶನದಲ್ಲಿ ಶಾಸಕರಿಗೆ ದಿನಭತ್ಯೆ ಇಲ್ಲವೇ ಊಟ- ಉಪಹಾರ ನೀಡಬೇಕು. ಹಾಗೇನಾದರೂ ಎರಡನ್ನೂ ನೀಡಿದರೆ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಹೀಗಾಗಿ, ಸಾರ್ವಜನಿಕರ ಪರವಾಗಿ ಈ ಬಗ್ಗೆ ಕಾನೂನಾತ್ಮಕ ಹೋರಾಟ ನಡೆಸಲಾಗುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು‌.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ ಸಮಯದಲ್ಲಿ ಶಾಸಕರಿಗಳಿಗೆ ದಿನಕ್ಕೆ ₹ 2500 ದಿನ ಭತ್ಯೆಗಳನ್ನು ನೀಡಲಾಗುತ್ತಿದೆ. ಅದರಲ್ಲಿ, ತಮಗೆ ಇಷ್ಟದ ಊಟ ಉಪಹಾರ ಹಾಗೂ ಚಹಾ, ಕಾಫಿ ಸೇವಿಸಬಹುದು. ಹೀಗಾಗಿ, ಯಾವುದೇ ಕಾರಣಕ್ಕೂ ಶಾಸಕರಿಗೆ ಉಚಿತವಾಗಿ ಊಟ- ಉಪಹಾರ ನೀಡಬಾರದು‌ ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಅಧಿವೇಶನದಲ್ಲಿ ದಿನಭತ್ಯೆ ಮತ್ತು ಉಚಿತ ಊಟ-ಉಪಹಾರಗಳನ್ನು ಶಾಸಕರಿಗೆ ನೀಡಿದ್ದಲ್ಲಿ, ಅದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಭಾಪತಿಗಳು, ಸಭಾಧ್ಯಕ್ಷರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಸ್ವಂತ ಜೇಬಿನಿಂದ ಸರ್ಕಾರಕ್ಕೆ ಪಾವತಿಸುವಂತೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿದ್ದಪ್ಪ ಬಳೆಗಾರ, ಸಂಗಯ್ಯ ಹಿರೇಮಠ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

₹400 ಕೋಟಿ ದರೋಡೆ ಕೇಸ್‌ನ ಸಂಭಾಷಣೆ ಆಡಿಯೋ ವೈರಲ್‌!
ಇಂದಿನಿಂದ ಮತ್ತೆ ಕಲಾಪ : ಭಾರೀ ಕೋಲಾಹಲ ನಿರೀಕ್ಷೆ