ಕನ್ನಡಪ್ರಭ ವಾರ್ತೆ ಸೊರಬ
ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನ ಆಡಳಿತ ಮಂಡಳಿ ಕಚೇರಿಯಲ್ಲಿ ಅರಣ್ಯ, ಮುಜರಾಯಿ, ಕಂದಾಯ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಶ್ರೀ ರೇಣುಕಾಂಬ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಕೊರತೆ ಇಲ್ಲ. ಆದರೆ, ದೇಗುಲವು ಪುರಾತತ್ವ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕಾನೂನಾತ್ಮಕ ಸಮಸ್ಯೆಗಳು ಎದುರಾಗಿವೆ. ಇವುಗಳನ್ನು ಶೀಘ್ರವೇ ನಿವಾರಿಸಿಕೊಂಡು, ಭಕ್ತರು ಹಾಗೂ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೂಲ ಸೌಲಭ್ಯ ಒದಗಿಸಲಾಗುವುದು ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ದೇವಸ್ಥಾನದ ಬಗ್ಗೆ ಕಾಳಜಿ ಹೊಂದಿದ್ದಾರೆ. ದೇವಸ್ಥಾನ ಪ್ರಾಂಗಣದ ಸುಮಾರು ೩೦೦ ಮೀಟರ್ ಆವರಣದಲ್ಲಿ ಕೆಲಸಗಳನ್ನು ಕೈಗೊಳ್ಳುವಂತಿಲ್ಲ. ಈಗಾಗಲೇ ಅಗತ್ಯವಿರುವ ಸುಮಾರು ೨೫ ವಿವಿಧ ಕಾಮಗಾರಿಗಳ ಕುರಿತು ಪಟ್ಟಿ ತಯಾರಿಸಲಾಗಿದೆ. ಈ ಬಗ್ಗೆ ಪುರಾತತ್ವ ಇಲಾಖೆಗೆ ಮಾಹಿತಿ ನೀಡಲಾಗುವುದು ಎಂದರು.
ಸಭೆಯಲ್ಲಿ ಸಾಗರ ಉಪ ವಿಭಾಗಾಧಿಕಾರಿ ಆರ್.ಯತೀಶ್, ತಹಶೀಲ್ದಾರ್ ಮಂಜುಳಾ ಹೆಗಡಾಳ್, ಮುಜರಾಯಿ ತಹಶೀಲ್ದಾರ್ ಪ್ರದೀಪ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ, ಪುರಾತತ್ವ ಇಲಾಖೆಯ ಕಾರ್ಯ ನಿರ್ವಹಣಾಧಿಕಾರಿ ನಂದಕುಮಾರ್, ಪ್ರವಾಸೋದ್ಯಮ ಇಲಾಖೆಯ ಧರ್ಮಪ್ಪ ಸೇರಿದಂತೆ ಕಂದಾಯ, ಅರಣ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. .