ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ಸಿ.ಬಿ.ಆರ್. ಕಾನೂನು ಮಹಾವಿದ್ಯಾಲಯದ ವತಿಯಿಂದ ಶುಕ್ರವಾರ ಚಂದನ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ `ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತರ ಪಾತ್ರ ಕುರಿತು ಮಾತನಾಡಿ, ವಕೀಲಿ ವೃತ್ತಿಯನ್ನು ನೊಬಲ್ ಪ್ರೊಫೆಷನ್ ಎಂದು ಬಣ್ಣಿಸಲಾಗಿದೆ. ದೇಶವನ್ನು ಸುಭದ್ರವಾಗಿ ಕಟ್ಟುವ ಕಾರ್ಯದಲ್ಲಿ ವಕೀಲರ ಪಾತ್ರ ಮಹತ್ವದ್ದು ಎಂದರು.
ಸಾರ್ವಜನಿಕ ಆಡಳಿತದಲ್ಲಿ ಉಂಟಾಗುತ್ತಿರುವ ತೊಡಕುಗಳನ್ನು ನಿವಾರಿಸಲು ಲೋಕಾಯುಕ್ತ ಕಾಯ್ದೆ ಉತ್ತಮವಾದ ಕಾನೂನು. ಪ್ರತಿಯೊಬ್ಬ ಮಾನವನಿಗೆ ಬದುಕುವ ಹಕ್ಕಿದೆ. ಅಂತಹ ಬದುಕಿಗೆ ಬೇಕಾದ ಮೂಲಭೂತ ಅಗತ್ಯತೆಗಳನ್ನು ಒದಗಿಸುವುದು ಆಡಳಿತದ ಕರ್ತವ್ಯ. ಅದರೆ ಭ್ರಷ್ಟಾಚಾರ ವ್ಯವಸ್ಥೆಯಿಂದ, ದುರಾಡಳಿತದಿಂದ ಮನುಷ್ಯನಿಗೆ ಬದುಕಲು ಬೇಕಾದ ಅನಿವಾರ್ಯತೆಗಳನ್ನು ನೀಡುವಲ್ಲಿ ವಿಫಲವಾದಾಗ, ಲೋಕಾಯುಕ್ತ ವ್ಯವಸ್ಥೆ ಸಾಮಾನ್ಯ ಜನರ ಪರವಾಗಿ ನಿಲ್ಲುತ್ತದೆ ಎಂದು ತಿಳಿಸಿದರು.ಸಮಯೋಚಿತವಾಗಿ ಕಾನೂನನ್ನು ಬಳಕೆ ಮಾಡಿಕೊಳ್ಳಬೇಕು. ಕರ್ತವ್ಯ ಮತ್ತು ಹಕ್ಕು ಒಂದು ನಾಣ್ಯದ ಎರಡು ಮುಖಗಳು. ಸತ್ತ ನಂತರವೂ ವ್ಯಕ್ತಿಯ ಮೃತದೇಹವನ್ನು ಕಾನೂನು ಕಾಪಾಡುತ್ತದೆ. ಅಷ್ಟರ ಮಟ್ಟಿಗೆ ಕಾನೂನು ಮಾನವ ಹಕ್ಕುಗಳನ್ನು ಎತ್ತಿ ಹಿಡಿಯುತ್ತಿದೆ. ಮೌಢ್ಯತೆ ಹೆಚ್ಚು ಪ್ರಾಬಲ್ಯಗೊಂಡಾಗ ಕಾನೂನು ಮಧ್ಯೆ ಪ್ರವೇಶಿಸುತ್ತದೆ. ಅದಕ್ಕೆ ಲಿಂಗ ತಾರತಮ್ಯ ಹೋಗಲಾಡಿಸಿ, ಎಲ್ಲರಿಗೂ ಬದುಕುವ ಹಕ್ಕಿದೆ ಎಂದು ಸಾರಿ ಹೇಳುವ ಕಾಯ್ದೆಗಳು ತೀರ್ಪುಗಳು ಉದಾಹರಣೆಯಾಗಿದೆ. ಒಬ್ಬರ ಹಕ್ಕುಗಳನ್ನು ಇನ್ನೊಬ್ಬರು ಕಾಪಾಡುವುದು ಕೂಡ ಮೂಲಭೂತವಾಗಿ ಕರ್ತವ್ಯವೇ ಆಗಿದೆ ಎಂದರು. ಲಂಚಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಗುತ್ತಿದೆ. ಹಣವಿಲ್ಲದೆ ಏನು ಆಗುವುದಿಲ್ಲ ಎಂಬ ಪರಿಸ್ಥಿತಿ ಸಾರ್ವಜನಿಕ ಆಡಳಿತದಲ್ಲಿದೆ. ಇಂತಹ ವ್ಯವಸ್ಥೆಯನ್ನು ಸರಿಪಡಿಸುವಲ್ಲಿ ಸಾಮಾನ್ಯ ಜನರು ಕೂಡ ಲೋಕಾಯುಕ್ತದೊಂದಿಗೆ ಕೈಜೋಡಿಸಿ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ, ನಿರ್ದೇಶಕರಾದ ಎಂ.ಆರ್. ಸೀತಾಲಕ್ಷ್ಮೀ, ಅನಂತದತ್ತ, ಅಶ್ವತ್ಥನಾರಾಯಣ ಶ್ರೇಷ್ಟಿ, ಶಿವಕುಮಾರ್, ಕುಲಸಚಿವ ಪ್ರೊ. ಎನ್.ಕೆ. ಹರಿಯಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವಾಮಿ, ಪ್ರಾಚಾರ್ಯೆ ಡಾ. ಎ. ಅನಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.