ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಕುಪ್ಪಹಳ್ಳಿ ಶ್ರೀ ಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯಿಂದ ಪಿತೃ ಪಕ್ಷದ ಅಂಗವಾಗಿ ಕುರುಕ್ಷೇತ್ರ ಅಥವಾ ಧರ್ಮ ರಾಜ್ಯ ಸ್ಥಾಪನೆ ಎಂಬ ಸುಂದರ ಪೌರಾಣಿಕ ನಾಟಕ ಉದ್ಘಾಟಿಸಿ ಮಾತನಾಡಿದರು.
ಒಂದು ಕಾಲದಲ್ಲಿ ಪೌರಾಣಿಕ ನಾಟಕಗಳು ಗ್ರಾಮಿಣ ಜನರಿಗೆ ಮನರಂಜನೆಯ ಬಹುಮುಖ್ಯ ಮಾಧ್ಯಮಗಳಾಗಿದ್ದವು. ನಾಟಕಗಳ ಮೂಲಕ ನಮ್ಮ ಹಿರಿಯರು ಜೀವನ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿಕೊಡುತ್ತಾ ಅವರಿಗೆ ಬದುಕಿನ ಸನ್ಮಾರ್ಗವನ್ನು ತೋರಿಸುತ್ತಿದ್ದರು ಎಂದರು.ಪುರಾಣದ ಪಾತ್ರಗಳ ಮೂಲಕ ಬದುಕಿನ ಆದರ್ಶಗಳನ್ನು ಮಕ್ಕಳ ಮನಸ್ಸಿಗೆ ತುಂಬಿಸುತ್ತಾ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬೇರುಗಳನ್ನು ಗಟ್ಟಿಗೊಳಿಸುತ್ತಿದ್ದರು. ಇಂದು ಮೊಬೈಲ್ ಸಂಸ್ಕೃತಿ ಎಲ್ಲವನ್ನೂ ಮರೆಮಾಚುತ್ತಿದೆ. ಗ್ರಾಮೀಣ ಭಾಗದ ಪೌರಾಣಿಕ ನಾಟಕಗಳನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದರು.
ಈ ವೇಳೆ ಪುರಸಭಾ ಸದಸ್ಯ ಬಸ್ ಸಂತೋಷ್, ಬಂಡಿಹೊಳೆ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಿ ಅಣ್ಣಪ್ಪ, ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಕೆ.ಆರ್.ಜಯರಾಮೇಗೌಡ, ನಿವೃತ್ತ ಶಿಕ್ಷಕ ರಾಮೇಗೌಡ, ಗ್ರಾಪಂ ಸದಸ್ಯ ದರ್ಶನ್, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಸುನಿಲ್, ಕೃಷಿ ಪತ್ತಿನ ಸಂಘದ ಉಪಾಧ್ಯಕ್ಷ ಸೋಮನಾಯ್ಕ, ಮುಖಂಡರಾದ ವಿಶ್ವನಾಥ್, ಉಮೇಶ್ ನಾಯ್ಕ, ರಂಗಣ್ಣ,ರವೀಂದ್ರ, ರಾಮಯ್ಯ, ಅಲೆನಹಳ್ಳಿ ಕುಮಾರ್, ಪ್ರಸನ್ನ, ಕೆ.ಟಿ ಮಹೇಶ್ ಕುಮಾರ್, ಪ್ರಭಾಕರ್, ಡ್ರಾಮಾ ಮಾಸ್ಟರ್ ಸುನಿಲ್, ಕಲಾವಿದರಾದ ನಂಜುಂಡ, ರಘು ಹೊಸಹೊಳಲು ಸೇರಿದಂತೆ ಕುಪ್ಪಳ್ಳಿ ಗ್ರಾಮಸ್ಥರಿದರು.
ಮಂಡ್ಯ:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿ.ನರಸೀಪುರ ಬುದ್ಧ ವಿಹಾರದ ಪೂಜ್ಯಭಂತೇ ಸುಗತಪಾಲ ಬಂತೇಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ನಿವೃತ್ತ ಪೊಲೀಸ್ ಮಹಾ ನಿರೀಕ್ಷಕ ಎಸ್.ಮರಿಸ್ವಾಮಿ ಸಮಾರಂಭ ಉದ್ಘಾಟಿಸುವರು. ಸಭಾದ ಕರ್ನಾಟಕ ಅಧ್ಯಕ್ಷ ಎಸ್.ಸಿದ್ದರಾಜು ಭಾಗವಹಿಸುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಜಯರಾಮು ಚೋಕನಹಳ್ಳಿ, ಪ್ರೊ.ಸಿದ್ದರಾಮು, ಕೆ.ಸಿದ್ದಯ್ಯ, ಕೆ.ವೆಂಕಟಾಚಲ ಇದ್ದರು.