ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಅವರು ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ಶ್ರೀಲಕ್ಷ್ಮೀದೇವಿ ಕೃಪಾ ಪೋಷಿತ ನಾಟಕ ಮಂಡಳಿಯವರು ದಸರಾ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಂಕ್ಷಿಪ್ತ ಮಹಾಭಾರತ ಅಥವಾ ಭೀಮ-ದುರ್ಯೋದನ ಗದಾಯುದ್ದ ಎಂಬ ಪೌರಾಣಿಕ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದ ಪರಿವರ್ತನೆಗೆ ಪೌರಾಣಿಕ ನಾಟಕಗಳು ಪ್ರಭಾವ ಬೀರುತ್ತವೆ. ಟೀವಿ ಧಾರಾವಾಹಿ, ಸಿನಿಮಾ, ರೀಲ್ಸ್, ಯುಟ್ಯೂಬ್, ಫೇಸ್ಬುಕ್, ವಾಟ್ಸಾಪ್ ಹಾವಳಿಯ ನಡುವೆಯೂ ಪೌರಾಣಿಕ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಜನಮನ್ನಣೆಗೆ ಪಾತ್ರವಾಗಿವೆ. ಜನರೂ ಪೌರಾಣಿಕ ನಾಟಕಗಳ ಕಡೆ ಆಕರ್ಷಿತರಾಗಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮಾತನಾಡಿ, ಸಿನಿಮಾ, ಟಿವಿ ಧಾರಾವಾಹಿಗಳ ಪ್ರಭಾವ ಎಷ್ಟೇ ಬೀರಿದರೂ ನಾಟಕ ಎಂದೆಂದಿಗೂ ಜೀವಂತವಾಗಿರುತ್ತದೆ. ನಾಟಕಗಳನ್ನು ಪ್ರೋತ್ಸಾಹಿಸುವ ಮೂಲಕ ಕಲೆಯನ್ನು ಉಳಿಸಬೇಕು. ಸಮಾಜದಲ್ಲಿ ಕಲಾವಿದರಿಗೆ ಉತ್ತಮ ಸ್ಥಾನಮಾನಗಳು ಸಿಗಬೇಕು. ಕಲಾವಿದರ ಬದುಕು ಸಂಕಷ್ಟದಲ್ಲಿದ್ದರೂ ತಮ್ಮಲ್ಲಿ ರಕ್ತಗತವಾದ ಕಲೆಯಿಂದ ಎಲ್ಲರ ಮನರಂಜಿಸುತ್ತಾರೆ. ಹಾಗಾಗಿ ಸಾರ್ವಜನಿಕರು ನಾಟಕಗಳನ್ನು ನೋಡಿ ಪ್ರೋತ್ಸಾಹಿಸುವ ಮೂಲಕ ಕಲಾವಿದರಿಗೆ ಶಕ್ತಿಯಾಗಿ ನಿಲ್ಲಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮೆಣಸ ವಿ.ಎನ್.ಮಹಾದೇವೇಗೌಡ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಬಿ.ವಿ.ನಾಗೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿಕ್ಕೋಸಹಳ್ಳಿ ಸುರೇಶ್, ಸೊಸೈಟಿ ನಿರ್ದೇಶಕ ಮಹೇಂದ್ರ, ಎ.ಎಸ್.ರಾಮಚಂದ್ರೇಗೌಡ, ಗ್ರಾಮ ಪಂಚಾಯಿತಿ ಸದಸ್ಯರಾದ ಆರ್.ರಮೇಶ್, ಚನ್ನೇಗೌಡ, ರೇಣುಕಾ ಈಶ್ವರ್ ಇತರರಿದ್ದರು.