ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಪಟ್ಟಣದ ಕೃಷ್ಣಮಂದಿರದಲ್ಲಿ ನಡೆದ ತಮ್ಮ ಅಭಿಮಾನಿಗಳು ಮತ್ತು ಸ್ನೇಹಿತರ ಸಭೆಯಲ್ಲಿ ಮಾತನಾಡಿದ ಅವರು, ಸಂಸತ್ತಿಗೆ ಸಾಹಿತಿಗಳು, ಬುದ್ಧಿ ಜೀವಿಗಳು, ವಿದ್ವಾಂಸರು, ಉತ್ತಮ ಆಡಳಿತಗಾರರನ್ನು ಆಯ್ಕೆ ಮಾಡಿದಾಗ ಮಾತ್ರ ಗೌರವ ಹೆಚ್ಚುತ್ತದೆ ಎಂದು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದಂತೆ ಭಾರತ ದೇಶದ ವಿಧಾನಸಭೆ ಮತ್ತು ಸಂಸತ್ತಿನ ಭಾವನೆಗಳ ಬೀಗದ ಕೀಲಿ ರಾಜಕೀಯ ಅಧಿಕಾರ ಅದನ್ನು ದುರುಪಯೋಗಪಡಿಸಿಕೊಳ್ಳುವವರಿಗೆ ಯಾವುದೇ ಕಾರಣಕ್ಕೂ ಅಧಿಕಾರ ನೀಡಬೇಡಿ ಆದ್ದರಿಂದ ಸಂಸತ್ತಿಗೆ ಪ್ರವೇಶ ಮಾಡಿದ ನಂತರ ಪಕ್ಷಾತೀತವಾಗಿ ಜಾತ್ಯತೀತವಾಗಿ ಜನಸೇವೆ ಮಾಡುವಂತಹ ಉತ್ತಮ ರಾಜಕೀಯ ವ್ಯಕ್ತಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.ಕೂಡಿಟ್ಟ ಹಣದ ರಕ್ಷಣೆಗೋಸ್ಕರ ರಾಜಕೀಯಕ್ಕೆ ಬರುತ್ತಿದ್ದಾರೆ
ಎಚ್ಡಿಕೆಯನ್ನು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ
ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ ಎಚ್. ವಿಶ್ವನಾಥ್ ಮೈಸೂರು ಲೋಕಸಭಾ ಅಭ್ಯರ್ಥಿಯಾಗಿ ನಿಂತಿರುವ ಯದುವೀರ್ ಒಡೆಯರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಾಗಿದ್ದ ಕಾಂಗ್ರೆಸ್ ತಪ್ಪು ಮಾಡಿದೆ, ರೈತರಿಗಾಗಿ ಅಣೆಕಟ್ಟೆಗಳನ್ನು ಕಟ್ಟಿ, ಶಾಲಾ ಕಾಲೇಜು ಆಸ್ಪತ್ರೆಗಳು ರಸ್ತೆಗಳನ್ನು ನಿರ್ಮಿಸುವ ಮೂಲಕ ಮೈಸೂರು ಒಡೆಯರ ಕೊಡುಗೆ ಅಪಾರ ವಾಗಿದ್ದು, ಅಂತಹ ವ್ಯಕ್ತಿಯನ್ನು ಆಯ್ಕೆ ಮಾಡದೆ ಮತ್ಯಾವ ವ್ಯಕ್ತಿಯನ್ನು ಆಯ್ಕೆ ಮಾಡಬೇಕೆಂದು ಪ್ರಶ್ನಿಸಿದರು. ಚುನಾವಣೆ ಬರುತ್ತದೆ, ಹೋಗುತ್ತದೆ ಆದರೆ ವ್ಯಕ್ತಿಗತವಾಗಿ ಮಾಡಿದ ಟೀಕೆ ಟಿಪ್ಪಣಿಗಳು ಹಾಗೆಯೇ ಉಳಿಯುತ್ತವೆ, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ-ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಡುತ್ತಿರುವ ಟೀಕೆ ಟಿಪ್ಪಣಿಗಳು ಸಭ್ಯತೆಯ ಎಲ್ಲೆ ಮೀರುತ್ತಿದ್ದು, ಮುಂದಾದರು ಅವರ ಹುದ್ದೆಗಳ ಘನತೆ ಗೌರವಕ್ಕೆ ತಕ್ಕಂತೆ ಟೀಕಿಸುವುದನ್ನು ಕಲಿಯಲಿ ಎಂದು ತಿಳುವಳಿಕೆ ಹೇಳಿದರು.
ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್. ಚನ್ನಬಸಪ್ಪ, ನವ ನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ಬಸಂತ್, ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ಜಿಪಂ ಸದಸ್ಯ ಎಂ.ಟಿ. ಕುಮಾರ್, ದಲಿತ ಮುಖಂಡ ಹನಸೋಗೆ ನಾಗರಾಜು, ಪುರಸಭೆ ಸದಸ್ಯ ಪ್ರಭುಶಂಕರ್ ಮಾತನಾಡಿದರು. ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮೈಮಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ಪುರಸಭೆ ಮಾಜಿ ಅಧ್ಯಕ್ಷರಾದ ಡಿ. ಕಾಂತರಾಜು, ಭಾಗ್ಯಲಕ್ಷ್ಮಿ ಸುಬ್ರಮಣ್ಯ, ಜಿಲ್ಲಾ ಗ್ರಾಮಾಂತರ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಿಣಿ, ತಾಪಂ ಮಾಜಿ ಸದಸ್ಯ ತಮ್ಮಣ್ಣ, ಮುಖಂಡರಾದ ಶಿವಾಜಿ ಗಣೇಶ್, ಶಿವಣ್ಣ, ಪುರುಷೋತ್ತಮ, ಮಹಾದೇವ್ ಇದ್ದರು.