ಕಲಘಟಗಿ:
ಹೋರಿ ಕೊರಳಿಗೆ ಚಿರತೆ ಬಾಯಿ ಹಾಕಲು ಮುಂದಾದಾಗ ಹೋರಿ ಪ್ರತಿರೋಧ ತೋರಿದೆ. ಇಷ್ಟಕ್ಕೆ ಸುಮ್ಮನಾಗದ ಚಿರತೆ ಕಾಲುಗಳಿಗೆ ಬಾಯಿ ಹಾಕಿದ್ದರಿಂದ ಹೋರಿಯ ಮುಂದಿನ ಎರಡು ಕಾಲುಗಳು ಮುರಿದಿವೆ. ಹತ್ತಿರದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಗಾಟ, ಚೀರಾಟ ಮಾಡಿದ್ದರಿಂದ ಚಿರತೆ ಕಬ್ಬಿನ ಗದ್ದೆಯಲ್ಲಿ ಓಡಿ ಹೋಗಿದೆ.
ಹತ್ತು ದಿನಗಳಲ್ಲಿ ಮೂರನೇ ದಾಳಿ:ಕೆ.ಹುಣಸಿಕಟ್ಟಿ ಗ್ರಾಮದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಚಿರತೆ ಹಾವಳಿ ವಿಪರೀತವಾಗಿದೆ. ವಾರದ ಹಿಂದೆ ಸಂಗಮೇಶ ಪಾಟೀಲ ಎಂಬವರಿಗೆ ಸೇರಿದ ಎರಡು ಕುರಿಮರಿ, ಮಲ್ಲನಗೌಡ ಪಾಟೀಲ ಎಂಬವರಿಗೆ ಸೇರಿದ ಜಾನುವಾರು ಹಾಗೂ ಗ್ರಾಮದ ಬೀದಿನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ.
ಚಿರತೆ ಉಪಟಳದಿಂದ ಗ್ರಾಮಸ್ಥರು ಭಯದಿಂದ ಓಡಾಡುವಂತಾಗಿದೆ. ಜಮೀನುಗಳಿಗೆ ಕೆಲಸಕ್ಕೆ ಹೋಗಲು ಕೃಷಿಕರು ಹಿಂದೇಟು ಹಾಕುತ್ತಿದ್ದಾರೆ. ದಾಳಿ ಪದೇ ಪದೇ ದಾಳಿ ನಡೆಸುತ್ತಿದ್ದರೂ ಬಂಧಿಸುವ ಪ್ರಯತ್ನ ನಡೆಸಿಲ್ಲ. ಅರಣ್ಯ ಇಲಾಖೆ ಆಯ್ದ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಬೋನು ಇಟ್ಟು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕು ಎಂದು ಕೆ.ಹುಣಸಿಕಟ್ಟಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಉಪ ವಲಯ ಅರಣ್ಯಾಧಿಕಾರಿ ಕೆ.ಎಲ್. ಬೇವಿನಕಟ್ಟಿ, ಗಸ್ತು ಅರಣ್ಯ ಪಾಲಕರು ಮೋಸಿನ್ ಗುಳಗುಂದಿ, ಅರಣ್ಯ ವೀಕ್ಷಕ ಈರಪ್ಪ ಆನಿ ಹಾಗೂ ಗ್ರಾಮಸ್ಥರು ಇದ್ದರು.