ಹಿಪ್ಪರಗಿ ಗ್ರಾಮದಲ್ಲಿ ಎಮ್ಮೆ ಕರು ಮೇಲೆ ಚಿರತೆ ದಾಳಿ

KannadaprabhaNewsNetwork |  
Published : May 14, 2026, 01:45 AM IST
ಜಮಖಂಡಿ ತಾಲುಕಿನ ಹಿಪ್ಪರಗಿ ಗ್ರಾಮದ ಹಳಿಪುರಮಠ ಪ್ರದೇಶಧ ಈರಪ್ಪ ವಜ್ರವಾಡ ಎಂಬುವರ ತೋಟದಲ್ಲಿ ಕಟ್ಟಿದ್ದ ಎಮ್ಮೆಯ ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ, ಕರುವಿನ ಕಾಲು ಹಾಗೂ ಬೆನ್ನಿನ ಮೇಲೆ ಗಾಯದ ಗುರುತುಗಳಾಗಿವೆ. | Kannada Prabha

ಸಾರಾಂಶ

ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಂಂಗಳವಾರ ಸಂಜೆ 7 ಗಂಟೆಯ ಸುಮಾರಿಗೆ ಈರಪ್ಪ ವಜ್ರವಾಡ ಎಂಬುವವರ ತೋಟದ ಮನೆಯಲ್ಲಿ ಕಟ್ಟಲಾಗಿದ್ದ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ಮಾಡಿದೆ.

ಕನ್ನಡಪ್ರಭ ವಾರ್ತೆ ಜಮಖಂಡಿ

ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಂಂಗಳವಾರ ಸಂಜೆ 7 ಗಂಟೆಯ ಸುಮಾರಿಗೆ ಈರಪ್ಪ ವಜ್ರವಾಡ ಎಂಬುವವರ ತೋಟದ ಮನೆಯಲ್ಲಿ ಕಟ್ಟಲಾಗಿದ್ದ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ಮಾಡಿದೆ. ಎಮ್ಮೆಕರು ಭಯದಿಂದ ಬೆದರಿ ಒದರಾಡುವುದನ್ನು ಕೇಳಿ ಈರಪ್ಪ ಸ್ಥಳಕ್ಕೆ ಧಾವಿಸಿದ್ದಾರೆ. ಕರುವನ್ನು ಗಾಯಗೊಳಿಸಿ ಚಿರತೆ ಓಡಿ ಹೋಗಿದೆ ಎಂದು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಚಿರತೆಯ ಹೆಜ್ಜೆಗುರುತು ಹಾಗೂ ಕರುವಿನ ಬೆನ್ನು ಹಾಗೂ ಕಾಲಿನ ಭಾಗದಲ್ಲಿರುವ ಗಾಯದ ಗುರುತು ಪರಿಶೀಲಿಸಿ ಚಿರತೆ ಇರುವುದನ್ನು ಖಚಿತಪಡಿಸಿದ್ದಾರೆ. ಬೊನ್‌ಗಳನ್ನು ಅಳವಡಿಸಿ ಚಿರತೆಯ ಸೆರೆಗೆ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಹಿಪ್ಪರಗಿ ಗ್ರಾಮದ ಹಳಿಪುರಮಠದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ತೋಟದ ಮನೆಗಳಲ್ಲಿ ವಾಸಿಸುವ ಹತ್ತಾರು ಕುಟುಂಬಗಳು ಆತಂಕದಲ್ಲೇ ರಾತ್ರಿ ಕಳೆದಿವೆ. ಬೇಸಿಗೆ ಕಾಲದಲ್ಲಿ ಸೆಕೆಯ ಕಾರಣ ಕುಟುಂಬದ ಸದಸ್ಯರು ಮನೆಯ ಹೊರಗೆ ಮಲಗುವುದು ಸಾಮಾನ್ಯ. ಆದರೆ ಚಿರತೆಯ ಭಯದಿಂದ ಸಾಕು ಪ್ರಾಣಿಗಳು ಸಮೇತ ಮನೆಯ ಒಳಗೆ ಮಲಗುವ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದ್ದಾರೆ.

ಚಿರತೆ ಕಾಣಿಸಿಕೊಂಡಿರುವುದರಿಂದ ಮಕ್ಕಳು ಹಾಗೂ ವೃದ್ಧರು, ಮಹಿಳೆಯರು ತೋಟದ ಕೆಲಸಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ರಾತ್ರಿ ಯುವಕರ ಗುಂಪು ಚಿರತೆ ಕಾಯಲು ತಿರುಗಾಟ ನಡೆಸಿವೆ. ಅರಣ್ಯ ಇಲಾಖೆಯವರು ಕೂಡಲೇ ಕ್ರಮ ಜರುಗಿಸುವಂತೆ ಮನವಿ ಸ್ಥಳೀಯರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರ ಬೆಂಬಲಕ್ಕೆ ಸದಾ ಸಿದ್ಧ: ಡಾ.ಆಶಾದೇವಿ ಗುಡಗುಂಟಿ
ನಿಗಮಕ್ಕೆ ಅಗತ್ಯ ಭೂಮಿ ಹಸ್ತಾಂತರಕ್ಕೆ ಡಿಸಿ ಭರವಸೆ