ಹರದಗೆರೆಯಲ್ಲಿ ಬೋನಿಗೆ ಬಿದ್ದ ಚಿರತೆ

KannadaprabhaNewsNetwork |  
Published : Jan 18, 2026, 01:15 AM IST
ಗುಬ್ಬಿ ತಾಲ್ಲೂಕಿನ ಹರದಗೆರೆ ಭೋವಿ ಕಾಲೋನಿಯಲ್ಲಿ ಇಟ್ಟಿದ ಭೋನ್ ನಲ್ಲಿ ಚಿರತೆ ಸೆರೆ ಯಾಗದೆ. | Kannada Prabha

ಸಾರಾಂಶ

ಗುಬ್ಬಿ: ತಾಲೂಕಿನ ಹರದಗೆರೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದ್ದ ಚಿರತೆ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.

ಗುಬ್ಬಿ: ತಾಲೂಕಿನ ಹರದಗೆರೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದ್ದ ಚಿರತೆ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ಕೆಲ ದಿನಗಳಿಂದ ರೈತರ ಕುರಿ ಮೇಕೆ ನಾಯಿಗಳನ್ನು ಹಿಡಿದುಕೊಂಡು ತಿನ್ನುತ್ತಿದ್ದ ಚಿರತೆಯನ್ನು ಹಿಡಿಯುವಂತೆ ಈ ಭಾಗದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರವೇ ಸೆರೆಯಾಗಿದ್ದು ಜನರಲ್ಲಿ ಆತಂಕ ಕಡಿಮೆಯಾಗಿದೆ. ಕಾಣಿಸಿಕೊಂಡ ತಕ್ಷಣ ಆ ಭಾಗದ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಬೋನ್ ಇಡುವಂತೆ ಮನವಿ ಮಾಡಿದ್ದರು. ಕಾರ್ಯಾರಣೆಯಲ್ಲಿ ಅರಣ್ಯ ಇಲಾಖೆಯ ಸಂತೋಷ್, ಶಶಿಕುಮಾರ್, ನರಸಿಂಹಮೂರ್ತಿ, ಶಿವಕುಮಾರ್, ಷಣ್ಮುಖ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ