ಅಪರಿಚಿತ ವಾಹನಕ್ಕೆ ಸಿಲುಕಿ: ಚಿರತೆ ಸಾವು

KannadaprabhaNewsNetwork |  
Published : Apr 18, 2026, 02:15 AM IST
ವಾಹನಕ್ಕೆ ಸಿಲುಕಿ ಸಾವನ್ನಪ್ಪಿರುವ ಚಿರತೆ.. | Kannada Prabha

ಸಾರಾಂಶ

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಮೋಟೆಬೆನ್ನೂರ ಗ್ರಾಮದ ಕೋಟೆಗುಡ್ಡದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಬ್ಯಾಡಗಿ: ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಮೋಟೆಬೆನ್ನೂರ ಗ್ರಾಮದ ಕೋಟೆಗುಡ್ಡದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಈ ಪ್ರದೇಶವು ನಿರ್ಜನವಾಗಿದ್ದು, ಇಲ್ಲಿ 400 ಎಕರೆ ಕಾಯ್ದಿಟ್ಟ ಅರಣ್ಯ ಪ್ರದೇಶವಿದೆ. ಅಲ್ಲೇ ಓಡಾಡಿಕೊಂಡಿದ್ದ ಚಿರತೆಯು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ವೇಳೆ ಅಪರಿಚಿತ ವಾಹನಕ್ಕೆ ಸಿಲುಕಿದೆ.

ಚಿರತೆ ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸೇರಿದಂತೆ ಪಿಡಿಓ ಮಲ್ಲೇಶ ಮೋಟೆನವರ ಸ್ಥಳ ಪರಿಶೀಲನೆ ನಡೆಸಿದರು.

ಸುಮಾರು 2 ವರ್ಷದ ಹೆಣ್ಣು ಚಿರತೆಯೊಂದು ಸಾವನ್ನಪ್ಪಿದ್ದು, 2 ಅಡಿ ಎತ್ತರ, 5.4 ಅಡಿ ಉದ್ದವಿರುವುದಾಗಿ ಅರಣ್ಯಾಧಿಕಾರಿ ಲೋಕೇಶ ಮಾಹಿತಿ ನೀಡಿದರು. ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಥಳ ಮಹಜರು ನಡೆಸಿ ಚಿರತೆಯ ಶವ ದಫನ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಚ್ಚುವರಿ ಡಯಾಲಿಸಿಸ್ ಘಟಕ ಆರಂಭಿಸುವಂತೆ ಆಗ್ರಹ
ನರಗುಂದ ತಾಲೂಕಿನಲ್ಲಿ ಬಾರದ ಖಾಲಿ ಚೀಲ: ಕಡಲೆ ಖರೀದಿ ಕೇಂದ್ರಗಳೇ ಬಂದ್!