ತಂತಿ ಬೇಲಿಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು

KannadaprabhaNewsNetwork |  
Published : Jul 11, 2025, 11:48 PM ISTUpdated : Jul 12, 2025, 07:22 AM IST
11ಎಚ್ಎಸ್ಎನ್3 : ತಂತಿ ಬೇಲಿಗೆ ಸಿಲುಕಿ ಸಾವನ್ನಪ್ಪಿರುವ ಚಿರತೆ. | Kannada Prabha

ಸಾರಾಂಶ

ಕಾಡುಹಂದಿಯ ಬೇಟೆಗಾಗಿ ದುಷ್ಕರ್ಮಿಗಳು ಉರುಳು ಹಾಕಿದ್ದಾರೆಂದು ತಿಳಿದುಬಂದಿದೆ. ಚಿರತೆ ಆಹಾರ ಅರಸಿ ಬಂದು ನುಸುಳಿದಾಗ ಈ ದುರ್ಘಟನೆ ಸಂಭವಿಸಿದೆ.

ಬೇಲೂರು: ತಂತಿ ಬೇಲಿಯ ನಡುವೆ ಹಾಕಲಾಗಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಹಳೆಬೀಡು ಹೋಬಳಿಯ ಚೀಲನಾಯಕನಹಳ್ಳಿ ಗ್ರಾಮದ ಮೋಹನ್ ರಾಜ್ ಅವರಿಗೆ ಸೇರಿದ ಫಾರಂ ಸರ್ವೇ ನಂಬರ್ 113 ರ ಜಾಗದ ತಂತಿ ಬೇಲಿಗೆ ಸಿಕ್ಕಿಹಾಕಿಕೊಂಡು ಚಿರತೆ ಮೃತಪಟ್ಟಿದೆ. '

ಕಾಡುಹಂದಿಯ ಬೇಟೆಗಾಗಿ ದುಷ್ಕರ್ಮಿಗಳು ಉರುಳು ಹಾಕಿದ್ದಾರೆಂದು ತಿಳಿದುಬಂದಿದೆ. ಚಿರತೆ ಆಹಾರ ಅರಸಿ ಬಂದು ನುಸುಳಿದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಇತ್ತೀಚಿಗೆ ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಜನರು ಪ್ರಾಣಭಯದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ, ಕೂಡಲೇ ಅವುಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯವರನ್ನು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಜ.1ರಿಂದ ಭೂರಹಿತರಿಂದ ಹೋರಾಟಕ್ಕೆ ನಿರ್ಣಯ
ಚಿನ್ನಕ್ಕಿಂತ ಆರೋಗ್ಯ, ನೆಮ್ಮದಿ ಮುಖ್ಯ: ಮಹಂತೇಶ್‌