ಹಿರಿಯೂರಿನಲ್ಲಿ ತೋಟಕ್ಕೆ ನುಗ್ಗಿ ನಾಯಿಯನ್ನು ಕೊಂದ ಚಿರತೆ

KannadaprabhaNewsNetwork |  
Published : Dec 31, 2025, 01:45 AM IST
ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಕಳೆದ ೨ ದಿನಗಳ ಹಿಂದೆ ಚಿರತೆಯೊಂದು ತೋಟಕ್ಕೆ ನುಗ್ಗಿ ನಾಯಿಯನ್ನು ಕೊಂದು ತಿಂದು ಹೋಗಿರುವ ಘಟನೆ ನಡೆದಿದೆ. ಈ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. | Kannada Prabha

ಸಾರಾಂಶ

ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಕಳೆದ ೨ ದಿನಗಳ ಹಿಂದೆ ಚಿರತೆಯೊಂದು ತೋಟಕ್ಕೆ ನುಗ್ಗಿ ನಾಯಿಯನ್ನು ಕೊಂದು ತಿಂದು ಹೋಗಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಭದ್ರಾವತಿ

ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಕಳೆದ ೨ ದಿನಗಳ ಹಿಂದೆ ಚಿರತೆಯೊಂದು ತೋಟಕ್ಕೆ ನುಗ್ಗಿ ನಾಯಿಯನ್ನು ಕೊಂದು ತಿಂದು ಹೋಗಿರುವ ಘಟನೆ ನಡೆದಿದೆ.

ಪತ್ರಕರ್ತ ಸುರೇಶ್‌ರವರ ತೋಟದಲ್ಲಿ ರಾತ್ರಿ ವೇಳೆ ಚಿರತೆ ನುಗ್ಗಿದ್ದು, ತೋಟದಲ್ಲಿದ್ದ ನಾಯಿಯನ್ನು ಕೊಂದು ತಿಂದಿದೆ. ಕೆಲ ಸಮಯ ಅಲ್ಲಿಯೇ ಇದ್ದು ಪುನಃ ಬಂದ ಮಾರ್ಗದಲ್ಲಿಯೇ ಹಿಂದಿರುಗಿದೆ. ಈ ದೃಶ್ಯ ತೋಟದಲ್ಲಿ ಅಳವಡಿಸಲಾಗಿರುವ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಸುರೇಶ್‌ರವರು ತೋಟದಲ್ಲಿ ನಾಯಿಗಳು ತಿರುಗಾಡಲು ಒಂದೇ ಒಂದು ಜಾಗ ಬಿಟ್ಟಿದ್ದು, ಆ ಜಾಗದ ಮೂಲಕವೇ ಚಿರತೆ ಬಂದಿದೆ. ನಾವು ಸಾಕಿರುವ ನಾಯಿಯನ್ನು ತಿಂದು ಪುನಃ ಹಿಂದಿರುಗಿದೆ. ಈ ಭಾಗದಲ್ಲಿ ರೈತರು ಹಗಲು ಮತ್ತು ಇರುಳಿನ ವೇಳೆಯಲ್ಲಿ ತಮ್ಮ ತೋಟಗಳಿಗೆ ತೆರಳುತ್ತಾರೆ. ಅಲ್ಲದೆ ರೈತರು ಜಾನುವಾರುಗಳನ್ನು ಮೇಯಲು ಬಿಡುತ್ತಾರೆ. ಈ ಭಾಗದಲ್ಲಿ ಎಚ್ಚರವಹಿಸುವುದು ಅಗತ್ಯವಾಗಿದೆ. ಈ ಕುರಿತು ಅರಣ್ಯ ಇಲಾಖೆ ಗಮನ ಹರಿಸಬೇಕಿದೆ. ಅರಣ್ಯ ಅಧಿಕಾರಿಗಳಿಗೆ ಚಿರತೆ ಸೆರೆ ಹಿಡಿಯಲು ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಕ್‌ ಜತೆ ರಾಜ್ಯ ಕಾಂಗ್ರೆಸ್‌ ಕೈಜೋಡಿಸಿದೆಯೇ? : ಬಿಜೆಪಿ
ಜಿ-ರಾಮ್‌ಜಿಯಿಂದ ದುರ್ಬಲರ ಹಕ್ಕಿಗೆ ಕುತ್ತು: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ