ಚಿಕ್ಕಮಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಸುಮಾರು ಐದು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇ ಬೋರನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಚಿರತೆ ಜಂಪ್ ಮಾಡುವ ವೇಳೆಗೆ ಟಿಟಿ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿದೆ. ಒಂದು ವೇಳೆ, ಚಿರತೆ ಗ್ರಾಮದ ಒಳಕ್ಕೆ ನುಗ್ಗಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು. ಆದರೆ, ಗ್ರಾಮದಿಂದ ಸುಮಾರು 300 ಮೀಟರ್ ದೂರದಲ್ಲಿ ಚಿರತೆ ರಸ್ತೆ ಕ್ರಾಸ್ ಮಾಡುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೋಟೋ ಫೈಲ್ ನೇಮ್ 6 ಕೆಸಿಕೆಎಂ 11ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಗ್ರಾಮದ ಬಳಿ ರಸ್ತೆ ದಾಟುವಾಗ ವಾಹನ ಡಿಕ್ಕಿಯಾಗಿ ಮೃತಪಟ್ಟಿರುವ ಚಿರತೆ.