ಚಿರತೆ ಪ್ರತ್ಯಕ್ಷ, ಭಯಭೀತರಾದ ಜನತೆ

KannadaprabhaNewsNetwork |  
Published : Jan 04, 2025, 12:31 AM IST
ಪೋಟೊ-೩ ಎಸ್.ಎಚ್.ಟಿ. ೧ಕೆ- ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಪತ್ತೆಗೆ ಕಾರ್ಯಾಚರಣೆ ನಡೆಸಿರುವುದು. | Kannada Prabha

ಸಾರಾಂಶ

ಮುಂಜಾಗ್ರತಾ ಕ್ರಮವಾಗಿ ಇಲಾಖೆಯ ಎರಡು ಜನ ಸಿಬ್ಬಂದಿ ಶೋಧ ಕಾರ್ಯ ನಡೆಸಲು ಬಿಟ್ಟಿದ್ದು, ನಿಖರವಾದ ಚಿರತೆ ಗುರುತು ಪತ್ತೆ ಹಚ್ಚಿದ್ದಾರೆ.

ಶಿರಹಟ್ಟಿ: ತಾಲೂಕಿನ ದೇವಿಹಾಳ ಹೊರವಲಯದಲ್ಲಿನ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಕಂಡು ಬಂದಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.

ರಾತ್ರಿ ಗ್ರಾಮದ ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡ ರೈತರ ಜಮೀನುಗಳಲ್ಲಿ ಚಿರತೆ ಸಂಚರಿಸಿದ್ದು, ಕೆಲ ರೈತರು ಪ್ರತ್ಯಕ್ಷವಾಗಿ ನೋಡಿದ್ದಾರೆ. ಭಯಗೊಂಡ ಜನತೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ರಣತೂರ ಗ್ರಾಪಂಯಿಂದ ಡಂಗುರ ಸಾರಿ ಜನರಲ್ಲಿ ಎಚ್ಚರಿಕೆ ಮೂಡಿಸಲಾಗಿದೆ.

ರೈತರು ಮತ್ತು ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ನಡೆಸಿದ್ದು, ನಿಖರವಾದ ಚಿರತೆ ಹೆಜ್ಜೆ ಗುರುತು ಕಂಡುಬಂದಿವೆ.

ರೈತರು ಪ್ರತ್ಯಕ್ಷವಾಗಿ ನೋಡಿದ್ದಾಗಿ ತಿಳಿಸಿದ್ದು, ಮತ್ತೆ ಅರಣ್ಯ ಪ್ರದೇಶದಲ್ಲಿಯೇ ಓಡಿ ಹೋಗಿರುವ ಮಾಹಿತಿ ನೀಡಿದ್ದಾರೆ.ಪ್ರಾಣಿಗಳು ಓಡಾಡುವ ಎಲ್ಲ ಪ್ರದೇಶದಲ್ಲಿಯು ಅರಣ್ಯ ಇಲಾಖೆ ಶೋಧ ಕಾರ್ಯ ನಡೆಸಿದ್ದು, ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿವೆ.

ಮುಂಜಾಗ್ರತಾ ಕ್ರಮವಾಗಿ ಇಲಾಖೆಯ ಎರಡು ಜನ ಸಿಬ್ಬಂದಿ ಶೋಧ ಕಾರ್ಯ ನಡೆಸಲು ಬಿಟ್ಟಿದ್ದು, ನಿಖರವಾದ ಚಿರತೆ ಗುರುತು ಪತ್ತೆ ಹಚ್ಚಿದ್ದಾರೆ. ಆದರೆ ಚಿರತೆ ಒಂದೇ ಪ್ರದೇಶದಲ್ಲಿ ಬೀಡು ಬಿಟ್ಟುಕೊಂಡು ಇರುವುದಿಲ್ಲ. ಇಲಾಖೆ ಸಿಬ್ಬಂದಿ ಬೆಳಗ್ಗೆ ಮತ್ತು ಸಂಜೆ ಶೋಧ ಕಾರ್ಯ ಮುಂದುವರೆಸಿದ್ದಾರೆ. ಗ್ರಾಮಸ್ಥರು ಯಾವುದೇ ರೀತಿಯ ಆತಂಕಪಡಬಾರದು ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ರಾಮಪ್ಪ ಪೂಜಾರ ತಿಳಿಸಿದ್ದಾರೆ.

ದೇವಿಹಾಳ ಗ್ರಾಮದ ದೊಡ್ಡಹಳ್ಳ ಅರಣ್ಯ ಪ್ರದೇಶದಲ್ಲಿ ದಟ್ಟವಾದ ಕಾಡು ಬೆಳೆದಿದ್ದು, ಈ ಪ್ರದೇಶದ ಸುತ್ತಮುತ್ತವೇ ನಮ್ಮ ಜಮೀನು ಇದ್ದು, ಚಿರತೆ ಕಿರುಚುವುದು, ಸದ್ದು ಮಾಡುವ ಶಬ್ದ ಕೇಳಿದ್ದು, ತೀವ್ರ ಭಯ ಹುಟ್ಟಿದೆ. ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಹೆಜ್ಜೆ ಗುರುತು ಕೂಡ ಪತ್ತೆಯಾಗಿವೆ. ಮಹಿಳೆಯರು, ರೈತರು ಹೊಲಕ್ಕೆ ತೆರಳಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕು ಎಂದು ದುರಗಪ್ಪ ಪವಾರ ಹೆಳಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ರಾತ್ರಿ ವೇಳೆ ರೈತರು ಹಾಗೂ ಕುರಿಗಾಹಿಗಳು ಬ್ಯಾಟರಿ ಬಳಕೆ ಹಾಗೂ ಬೆಂಕಿ ಹಾಕುವದು ಚಿರತೆ ಕಂಡು ಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡಲು ತಿಳಿಸಿದ್ದಾರೆ. ಜನರು ಭಯಗೊಳ್ಳದೆ ಇಲಾಖೆಯ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!