ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ (ಪದವಿಪೂರ್ವ) ಸಹಯೋಗದಲ್ಲಿ ಎನ್ಎಸ್ಎಸ್ ಸ್ವಯಂ ಸೇವಕರಿಗೆ ಡಾ. ಶಿವರಾಮ ಕಾರಂತ ವೇದಿಕೆಯಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
1969ರ ಸೆ.24ರಂದು ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಸೇವಾ ಯೋಜನೆ ಘೋಷಿತವಾಗಿ, ಅ.2ರಂದು ಮಹಾತ್ಮ ಗಾಂಧಿ ಜಯಂತಿಯಂದು ಅಧಿಕೃತವಾಗಿ ಅನುಷ್ಠಾನಗೊಂಡಿತು. ಇಂದು ಈ ಯೋಜನೆ ಐವತ್ತು ವರ್ಷಗಳ ಸಮೃದ್ಧ ಇತಿಹಾಸದ ಮೂಲಕ, ಲಕ್ಷಾಂತರ ಯುವಕರಲ್ಲಿ ಸೇವಾ ಮನೋಭಾವವನ್ನು ಬೆಳೆಸಿದ ಮಹತ್ವದ ಚಳವಳಿಯಾಗಿದೆ ಎಂದರು.ಶಿಕ್ಷಣ ಎಂದರೆ ಕೇವಲ ಪಠ್ಯಪುಸ್ತಕದ ಜ್ಞಾನವಲ್ಲ. ಶಕ್ತಿಯ ಅರಿವನ್ನು ಮಾಡಿಸುವುದೇ ಶಿಕ್ಷಣದ ನಿಜವಾದ ಉದ್ದೇಶ. ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಭಿನ್ನ ಸಾಮರ್ಥ್ಯ ಅಡಗಿದೆ. ಅದನ್ನು ಬೆಳಸಿಕೊಳ್ಳುವುದೇ ನಿಜವಾದ ಸಾಧನೆ. ಕೌಶಲ್ಯ ಎಂದರೆ ಕೆಲಸವನ್ನು ಪರಿಣಿತವಾಗಿ ಮಾಡುವ ಸಾಮರ್ಥ್ಯ. ಈ ಕೌಶಲ್ಯವನ್ನು ರೂಢಿಸಿಕೊಂಡರೆ ಮಾತ್ರ ವಿದ್ಯಾರ್ಥಿಗಳು ಯಶಸ್ವಿ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜಿನ ಕನ್ನಡ ಉಪನ್ಯಾಸಕ ಧರ್ಮೇಂದ್ರ ಕುದ್ರೋಳಿ, ಅವಕಾಶಗಳು ಬಂದಾಗ ಸದ್ಬಳಕೆ ಮಾಡಿಕೊಳ್ಳಬೇಕು. ಸೇವೆ ಮಾಡುವವರು ದೇವರ ಸಮಾನರು. ಎನ್ಎಸ್ಎಸ್ ಕೆಲಸ ದೇವರ ಕೆಲಸ. ವಿದ್ಯಾರ್ಥಿಗಳು ಸ್ವಾರ್ಥವನ್ನು ಬಿಟ್ಟು ಸಮಾಜ ಸೇವೆಗೆ ತೊಡಗಿಕೊಳ್ಳಲು ಎನ್ಎಸ್ಎಸ್ ಪ್ರೇರೇಪಿಸುತ್ತದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಮೇಘನಾ ಇದ್ದರು. ವಿದ್ಯಾರ್ಥಿ ವಿಕಾಸ್ ಶೆಟ್ಟಿ ಸ್ವಾಗತಿಸಿದರು. ಶಟಸ್ಥಳ ವಂದಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಭಾತ್ ಕಾರ್ಯಕ್ರಮ ನಿರೂಪಿಸಿದರು.