ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ಬಸವಾಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹೊಸ 108 ಸೇವೆ ಆ್ಯಂಬುಲೆನ್ಸ್ ವಾಹನಕ್ಕೆ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿ, ವೈದ್ಯಕೀಯ ಸೇವೆಗಳ ತುರ್ತು ಅಗತ್ಯ ಚಿಕಿತ್ಸೆ ತೊಡಕುಗಳನ್ನು ಕಡಿಮೆ ಮಾಡಲು ಮತ್ತು ರೋಗಿ ಬದುಕುಳಿಯುವ ಸಾಧ್ಯತೆ ಹೆಚ್ಚಿಸಲು ಆಮ್ಲಜನಕ ಚಿಕಿತ್ಸೆ, ಸುಧಾರಿತ ಔಷಧ ಮತ್ತು ಗರಿಷ್ಠ ಸಮಯದ ಬಳಕೆಗಾಗಿ ಸಾರಿಗೆಗಾಗಿ ತುರ್ತು ವಾಹನ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ತುರ್ತು ಸಂದರ್ಭಗಳಲ್ಲಿ 108 ವಾಹನ ಬಳಸಿ ಸೌಲಭ್ಯ ಕಲ್ಪಿಸುವತ್ತ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳು ಗಮನ ಹರಿಸಬೇಕೆಂದರು.
ತಹಸೀಲ್ದಾರ್ ಪಿ.ಎಸ್.ಯರ್ರಿಸ್ವಾಮಿ ಮಾತನಾಡಿ, 108 ತುರ್ತು ಆ್ಯಂಬುಲೆನ್ಸ್ ಸೇವೆಯು 24*7 ನಿರಂತರ ಉಚಿತ ಸೇವೆಯಾಗಿದ್ದು, ಯಾವುದೇ ತುರ್ತು ಸಂದರ್ಭದಲ್ಲಿ 108 ಸಂಖ್ಯೆಗೆ ಡಯಲ್ ಮಾಡುವ ಮೂಲಕ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಬಿ.ಜಿ.ಸಚಿನ್, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಗ್ರಾಪಂ ಸದಸ್ಯರಾದ ಸೈಯದ್ ಹಿದಾಯಿತ್, ಹರೋಸಾಗರ ಎ.ಕೆ.ಗಿರೀಶ್, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಈ.ಸತ್ಯ ಸುಂದರ, ಮುಖಂಡರಾದ ಜಿ.ಪ್ರಕಾಶ್, ಬಿ.ಮಾರುತಿ, ಆ್ಯಂಬುಲೆನ್ಸ್ ಸ್ಟಾಫ್ ನರ್ಸ್ ವಿ.ರಾಮಕೃಷ್ಣ, ಚಾಲಕರಾದ ಎಂ.ಹಾಲೇಶ್, ಆರ್.ದುರ್ಗೇಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.