ಕನ್ನಡಪ್ರಭ ವಾರ್ತೆ ಚೇಳೂರು
ಇತ್ತಿಚಿನ ದಿನಗಳಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳ ಸಂಚಾರದಲ್ಲಿ ಪೈಪೋಟಿ ಏರ್ಪಟ್ಟಿದ್ದು ವೇಗ ಮಿತಿಗಳಿಲ್ಲದೆ ಬಸ್ಸುಗಳು ವೇಗವಾಗಿ ಸಂಚರಿಸುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಬಾಗೇಪಲ್ಲಿ - ಚೇಳೂರು ಮುಖ್ಯ ರಸ್ತೆಯಲ್ಲಿ ಬರುವ ಗೋಟ್ಲಪಲ್ಲಿ ಗ್ರಾಮದ ಸಮೀಪ ಕೆರೆಯ ಸಮೀಪದ ರಸ್ತೆಯು ಇಳಿಜಾರಾಗಿದೆ ಹಾಗೂ ತಿರುವಿನಿಂದ ಕೂಡಿದೆ. ಇದರಿಂದ ವಾಹನ ಚಾಲಕರಿಗೆ ಸಮೀಪ ಬಂದ ಮೇಲೆ ಕೆರೆ ಇದೆ ಎಂದು ಗೊತ್ತಾಗುತ್ತದೆ. ವಾಹನ ಚಾಲಕರು ಸ್ವಲ್ಪ ಎಚ್ಚರ ತಪ್ಪಿದರೂ ಕೆರೆಗೆ ಬೀಳುವ ಅಪಾಯ ಎದುರಾಗಲಿದೆ ಎಂದು ಜನತೆ ದೂರಿದ್ದಾರೆ. ಕೆರೆಯ ಪಕ್ಕದ ರಸ್ತೆಯ ಬದಿಗೆ ತಡೆಗೋಡೆ ಮಾಡಿದರೆ ಮುಂದಿನ ದಿನಗಳಲ್ಲಿ ನಡೆಯಬಹುದಾದ ಅಪಘಾತ ತಪ್ಪಿಸಬಹುದು. ಜತೆಗೆ ಇಳಿಜಾರು ರಸ್ತೆಯಲ್ಲಿ ಕೆರೆ ಇರುವುದರ ಬಗ್ಗೆ ಮುನ್ನಚ್ಚರಿಕೆಯ ನಾಮಫಲಕ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಕೋಟ್......ಕೆರೆ ಕಟ್ಟೆ ಅಗಲ ಮಾಡಿ ಕಟ್ಟೆಗೆ ತಡೆ ಗೋಡೆ ನಿರ್ಮಾಣದ ಅವಶ್ಯಕವಿದೆ, ಆದ್ದರಿಂದ ಹೆಚ್ಚಿನ ಅನುದಾನ ಬೇಕಾಗುತ್ತದೆ. ಚುನಾವಣೆ ಮುಗಿದ ನಂತರ ದಿನಗಳಲ್ಲಿ ಸರ್ಕಾರದ ಗಮನಕ್ಕೆ ತಂದು, ಅನುದಾನ ಬಂದ ಕೂಡಲೇ ಶಾಶ್ವತವಾಗಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತೆವೆ.
- ಪ್ರದೀಪ್ ಎಇ, ಪಿಡಬ್ಲ್ಯೂಡಿ, ಬಾಗೇಪಲ್ಲಿ