ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು .
ಮಹಿಳೆಯರು ತಮ್ಮ ಕುಟುಂಬ ಮತ್ತು ಮಕ್ಕಳ ಪಾಲನೆ ಪೋಷಣೆಗೆ ಹೆಚ್ಚು ಒತ್ತು ಕೊಟ್ಟು ತಮ್ಮ ಆರೋಗ್ಯ ನಿರ್ಲಕ್ಷಿಸುತ್ತಾರೆ. ಹೆಚ್ಚಿನ ಹೆಣ್ಣು ಮಕ್ಕಳಲ್ಲಿ ರಕ್ತಹೀನತೆ ಇರುವ ಕುರಿತು ವರದಿಗಳು ಹೇಳುತ್ತವೆ. ಆದ್ದರಿಂದ ಹೆಣ್ಣು ಮಕ್ಕಳು ಆರೋಗ್ಯಕ್ಕೂ ಆದ್ಯತೆ ನೀಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸಿಕೊಳ್ಳಬೇಕು. ಕ್ರೀಡೆಗಳು ಆರೋಗ್ಯ ವೃದ್ಧಿಗೆ ಸಹಕಾರಿಯಾಗಿರುವುದರಿಂದ ಮಹಿಳೆಯರು ಮುಕ್ತವಾಗಿ ಎಲ್ಲ ಕ್ರೀಡೆಗಳಲ್ಲಿ ಭಾಗವಹಿಸುವಂತಾಗಬೇಕು ಎಂದು ಹೇಳಿದರು.ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಇನ್ನೂ ಬಯಲು ಶೌಚ ರೂಢಿಯಲ್ಲಿದೆ. ಇದು ಮಹಿಳೆಯರ ಸ್ಥಾನಮಾನಕ್ಕೆ ಚ್ಯುತಿ ತರುವಂತಾಗಿದೆ. ಬಯಲು ಬಹಿರ್ದೆಸೆ ಆರೋಗ್ಯದ ಮೇಲೂ ದುಷ್ಟಪರಿಣಾಮ ಬೀರುವುದರಿಂದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಶೌಚಾಲಯಗಳಿಗೆ ಬೇಡಿಕೆ ಇಡಬೇಕು. ಬೇಡಿಕೆ ಇಡುವ ಮಹಿಳೆಯರಿಗೆ ಜಿಲ್ಲಾಡಳಿತ ಬೆಂಗಾವಲಿನಂತೆ ನಿಂತು ಸಹಾಯ, ಸಹಕಾರ ನೀಡಲು ಸದಾ ಸಿದ್ಧವಿರುತ್ತದೆ ಎಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಂಕಜಾ ಜೋಷಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಕಸ್ತೂರಿ ಪಾಟೀಲ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಕ್ರೀಡಾ ತರಬೇತಿದಾರರಾದ ಅನೀತಾ ನಿಂಬರಗಿ ಸೇರಿದಂತೆ ಇತರರು ಇದ್ದರು.