ಬಸವೇಶ್ವರ ದೇವಾಲಯ ಶಾಲೆ ರಾಜ್ಯದಲ್ಲಿ ಮಾದರಿಯಾಗಲಿ: ಸಚಿವ ಶಿವಾನಂದ ಪಾಟೀಲ

KannadaprabhaNewsNetwork |  
Published : Feb 07, 2025, 12:30 AM IST
ಬಸವೇಶ್ವರ ದೇವಾಲಯ ಅಂತಾರಾಷ್ಟ್ರೀಯ ಶಾಲಾ ಆವರಣದಲ್ಲಿ ಶಾಲೆಯ ೧೩ನೇ ವಾರ್ಷಿಕೋತ್ಸವ ನಿಮಿತ್ತ ನಡೆದ ಕಲರ್ಸ್‌ ಆಫ್‌ ಕಲ್ಚರ್-೨೦೨೫ ಕಾರ್ಯಕ್ರಮವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿಕ್ಷಕರು ಶಾಲೆಯಲ್ಲಿ ಕಲಿಸಿದ್ದನ್ನು ಪಾಲಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಕಲಿಸುವ ಜವಾಬ್ದಾರಿ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ-ಪಾಲಕರ ಪಾತ್ರವಿದೆ.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಒಂದು ದೊಡ್ಡ ಕನಸು ಇಟ್ಟುಕೊಂಡು ಹಿರಿಯರು ಬಸವೇಶ್ವರ ದೇವಾಲಯ ಅಂತಾರಾಷ್ಟ್ರೀಯ ಶಾಲೆ ಆರಂಭಿಸಿದ್ದಾರೆ. ಈ ಶಾಲೆಯು ಕೇವಲ ಬಸವನಬಾಗೇವಾಡಿಗೆ ಸಿಮೀತವಾಗದೇ ಇಡೀ ರಾಜ್ಯದಲ್ಲಿಯೇ ಆದರ್ಶಮಯವಾದ ಶಾಲೆಯಾಗಬೇಕೆಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಬಸವೇಶ್ವರ ದೇವಾಲಯ ಅಂತಾರಾಷ್ಟ್ರೀಯ ಶಾಲಾ ಆವರಣದಲ್ಲಿ ಶಾಲೆಯ ೧೩ನೇ ವಾರ್ಷಿಕೋತ್ಸವ ನಿಮಿತ್ತ ನಡೆದ ಕಲರ್ಸ್‌ ಆಫ್‌ ಕಲ್ಚರ್-೨೦೨೫ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರಿಗೆ ಡಾ.ರಾಧಾಕೃಷ್ಣನ್ ಆದರ್ಶವಾಗಿದ್ದಾರೆ. ಸಮಾಜದಲ್ಲಿ ಶಿಕ್ಷಕರಿಗೆ ಗೌರವಯುತವಾದ ಸ್ಥಾನವಿದೆ. ತಂದೆ-ತಾಯಿಗೆ ಗೌರವ ನೀಡಿದಂತೆ ಶಿಕ್ಷಕರಿಗೂ ಗೌರವ ನೀಡಲಾಗುತ್ತದೆ. ಉತ್ತಮ ಜ್ಞಾನ ನೀಡುವ ಶಿಕ್ಷಕರ ಕೊರತೆ ಇಂದು ಕಾಣುತ್ತಿದೆ. ಶಿಕ್ಷಕರು ಶಾಲೆಯಲ್ಲಿ ಕಲಿಸಿದ್ದನ್ನು ಪಾಲಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಕಲಿಸುವ ಜವಾಬ್ದಾರಿ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ-ಪಾಲಕರ ಪಾತ್ರವಿದೆ. ಈ ಶಾಲೆಯಲ್ಲಿ ಉತ್ತಮ ಬೋಧಕ ವೃಂದವಿರುವುದು ಶ್ಲಾಘನೀಯ ಎಂದರು.

ಶಾಲೆಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಸಮಾಜಕ್ಕೆ ಹೋಗುವಂತಾಗಬೇಕು. ಈ ಶಾಲೆಗೆ ಬೇಕಾದ ಸಹಾಯ-ಸಹಕಾರ ನೀಡಲು ಸದಾ ಬದ್ಧ. ಮುಂದಿನ ದಿನಗಳಲ್ಲಿ ದೇವಾಲಯದ ೧೬ ಎಕರೆ ಜಮೀನಿನಲ್ಲಿ ಜಿಲ್ಲೆಯಲ್ಲಿಯೇ ಮಾದರಿಯಾಗುವ ಅಂತಾರಾಷ್ಟ್ರೀಯ ಶಾಲಾ ಕಟ್ಟಡ ನಿರ್ಮಿಸಿ ಈ ಶಾಲೆಗೆ ಒದಗಿಸುವ ಯೋಜನೆಯಿದೆ ಎಂದ ಅವರು, ಈ ಶಾಲೆಗೆ ಬೇಕಾದ ಎರಡು ಕೋಣೆ, ಶೌಚಾಲಯ ನಿರ್ಮಿಸುವ ಭರವಸೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು-ಶಿಕ್ಷಕರು ಮಕ್ಕಳಿಗೆ ಸಮಯ ಕೊಡುವ ಅಗತ್ಯವಿದೆ. ವಿದ್ಯೆ ಸರಿಯಾಗಿ ಕಲಿತರೆ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿದೆ. ಈ ಶಾಲೆಯಲ್ಲಿ ವಿನೂತನ ಕಾರ್ಯಕ್ರಮಗಳು ನಡೆಯಲು ಶಾಲೆಯ ಆಡಳಿತ ಮಂಡಳಿ ಶ್ರಮವಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಗುರಿಯೊಂದಿಗೆ ಶಾಲೆಯಿಂದ ತೆರಳುವಂತಾಗಬೇಕೆಂದರು.

ಸಚಿವ ಶಿವಾನಂದ ಪಾಟೀಲರು ಬಸವನಬಾಗೇವಾಡಿ ಮತಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುವ ಕಾಯಕ ಮಾಡುತ್ತಿರುವುದು ಸಂತಸದಾಯಕ. ಮುಂಬರುವ ದಿನಗಳಲ್ಲಿ ನಡೆಯುವ ಬಸವ ಜಯಂತಿಯನ್ನು ರಾಷ್ಟ್ರೀಯ ಬಸವ ಜಯಂತಿ ಆಚರಣೆಯಾಗುವಂತೆ ಸಚಿವರು ಪ್ರಯತ್ನಿಸುತ್ತಿರುವುದು ಸ್ವಾಗತಾರ್ಹ. ಇವರ ಅಭಿವೃದ್ಧಿ ಕಾರ್ಯಗಳು ಜನಮೆಚ್ಚಿಗೆಯಾಗಿವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಕನ್ನಡ ರಾಜ್ಯೋತ್ಸವ ಪುರಸ್ಕ್ರತ ಜನಪದ ಗಾಯಕ ಬಸವರಾಜ ಹಾರಿವಾಳ ಮಾತನಾಡಿದರು.

ವೇದಿಕೆಯಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕ್ರತ ಲೋಕನಾಥ ಅಗರವಾಲ, ಶಾಲಾ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಎಂ.ಜಿ.ಆದಿಗೊಂಡ, ಸುರೇಶಗೌಡ ಪಾಟೀಲ, ಪಿಂಟುಗೌಡ ಪಾಟೀಲ, ಸಚೀನ ಬಾಗೇವಾಡಿ, ಎಸ್.ಎ.ನದಾಫ, ಶೈಲಶ್ರೀ ತೇರದಾಳಮಠ, ಪ್ರತಿಭಾ ಮಸಬಿನಾಳ, ಪಿ.ಎಸ್.ರಾಯಗೊಂಡ, ಲಕ್ಷ್ಮೀ ಮಾಲಗಾರ, ಬೇಬಿ ಗಣಾಚಾರಿ, ಮೀನಾಕ್ಷಿ ಮೋದಿ,ಲಕ್ಷ್ಮೀ ಹಿಟ್ನಳ್ಳಿ, ಬಿಇಓ ವಸಂತ ರಾಠೋಡ ಇತರರು ಇದ್ದರು. ಶಾಲೆಯ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಎಸ್.ಎಸ್.ಝಳಕಿ ಪ್ರಾಸ್ತವಿಕವಾಗಿ ಮಾತನಾಡಿದರು. ಶಾಲೆಯ ಪ್ರಾಚಾರ್ಯೆ ಆರ್‌.ಎಂ.ರೋಣದ ವರದಿ ವಾಚಿಸಿದರು. ಬಿ.ಎನ್.ಹಂಚಲಿ ಸ್ವಾಗತಿಸಿದರು. ಎಸ್.ಎಂ.ಬಿಸ್ಟಗೊಂಡ. ಎಂ.ಆರ್‌.ಮುಕಾರ್ತಿಹಾಳ, ಎಸ್.ಪಿ.ಸಾಳಂಕೆ, ನಿರೂಪಿಸಿದರು. ಉಮೇಶ ಗೊಳಸಂಗಿ ವಂದಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕ್ರತರಿಗೆ, ಶಾಲೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಶಿಕ್ಷಕರಿಗೆ, ಶಾಲಾ ಪ್ರಗತಿಗೆ ದೇಣಿಗೆ ನೀಡಿದವರನ್ನು, ಶಾಲೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಪತ್ರಕರ್ತರನ್ನು ಸನ್ಮಾನಿಸಲಾಯಿತು. ನಂತರ ತಡರಾತ್ರಿಯವರೆಗೂ ವಿದ್ಯಾರ್ಥಿಗಳಿಂದ ಜರುಗಿದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜನಮನರಂಜಿಸಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ