ಭಗವದ್ಗೀತೆ, ಭಜನೆ ನಮ್ಮ ದಿನಚರಿಯಾಗಲಿ: ಸ್ವರ್ಣವಲ್ಲೀ ಶ್ರೀ

KannadaprabhaNewsNetwork |  
Published : Apr 01, 2025, 12:52 AM IST
೩೧ಎಸ್.ಆರ್.ಎಸ್೩ಪೊಟೋ೧ (ಸಾರ್ವಜನಿಕ ಯುಗಾದಿ ಉತ್ಸವವನ್ನು ಶ್ರೀಗಳು ಉದ್ಘಾಟಿಸಿದರು.)೩೧ಎಸ್.ಆರ್.ಎಸ್೩ಪೊಟೋ೨ (ಆಕರ್ಷಕ ಸ್ತಬ್ಧ ಚಿತ್ರಗಳ ಮೆರವಣಿಗೆ)೩೧ಎಸ್.ಆರ್.ಎಸ್೩ಪೊಟೋ೩ (ಯುಗಾದಿ ಉತ್ಸವದಲ್ಲಿ ಪಾಲ್ಗೊಂಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ.)೩೧ಎಸ್.ಆರ್.ಎಸ್೩ಪೊಟೋ೪ (ಯುಗಾದಿ ಉತ್ಸವದಲ್ಲಿ ಪಾಲ್ಗೊಂಡ ಭಗವದ್ ಧ್ವಜ ರಾರಾಜಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ.) | Kannada Prabha

ಸಾರಾಂಶ

ಗಂಗಾಮಾತೆ ಸ್ಮರಣೆ, ಸೂರ್ಯ ನಮಸ್ಕಾರ, ಭಗವದ್ಗೀತೆ ಪಠಣ, ಭಜನೆ ನಮ್ಮ ದಿನಚರಿಯಾಗಬೇಕು. ಭಗವದ್ಗೀತೆ ಮತ್ತು ಭಜನೆ ನಮ್ಮ ಶಕ್ತಿಯನ್ನು ಜಾಗ್ರತಗೊಳಿಸುತ್ತದೆ ಎಂದು ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು. ಶಿರಸಿಯ ವಿಕಾಸಾಶ್ರಮ ಮೈದಾನದಲ್ಲಿ ಆಯೋಜಿಸಿದ್ದ ೨೭ನೇ ಯುಗಾದಿ ಉತ್ಸವ ಸಮಾರಂಭದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ಶಿರಸಿ: ಗಂಗಾಮಾತೆ ಸ್ಮರಣೆ, ಸೂರ್ಯ ನಮಸ್ಕಾರ, ಭಗವದ್ಗೀತೆ ಪಠಣ, ಭಜನೆ ನಮ್ಮ ದಿನಚರಿಯಾಗಬೇಕು. ಭಗವದ್ಗೀತೆ ಮತ್ತು ಭಜನೆ ನಮ್ಮ ಶಕ್ತಿಯನ್ನು ಜಾಗ್ರತಗೊಳಿಸುತ್ತದೆ ಎಂದು ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ಅವರು ನಗರದ ವಿಕಾಸಾಶ್ರಮ ಮೈದಾನದಲ್ಲಿ ಆಯೋಜಿಸಿದ್ದ ೨೭ನೇ ಯುಗಾದಿ ಉತ್ಸವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

ಮನುಕುಲದ ಪಾಪ ತೊಳೆಯುವ ಪಾಪವಿನಾಶಿನಿ ಗಂಗಾ ಮಾತೆ ಪ್ರತಿಯೊಬ್ಬರ ಪ್ರಾತಃಸ್ಮರಣೀಯವಾಗಿದೆ. ಗಂಗೆಯನ್ನು ನೆನಯುವ ಮೂಲಕ ದಿನವನ್ನು ಪ್ರಾರಂಭಿಸಬೇಕು. ಸೂರ್ಯ ನಮಸ್ಕಾರ, ಭಗವದ್ಗೀತಾ ಪಠಣ, ಭಜನೆಯಂಥ ಒಳ್ಳೆಯ ಅಭ್ಯಾಸಗಳಿಂದ ಜೀವನದಲ್ಲಿ ಅತ್ಯುತ್ತಮ ಪರಿರ್ತನೆ ಹೊಂದಲು ಸಹಾಯಕವಾಗಿದೆ. ದೇವರಲ್ಲಿ ಭಕ್ತಿ ಬೆಳೆಸಿಕೊಂಡಷ್ಟು ಪರಿಪೂರ್ಣವಾಗಲು ಸಾಧ್ಯ ಎಂದರು.

ಸಂಘಟನೆ ಜಾಗ್ರತಿಯಿದ್ದಾಗ ಎಲ್ಲವನ್ನೂ ಎದುರಿಸಲು ಸಾಧ್ಯ. ಮಕ್ಕಳಿಗೆ ತಡವಾಗಿ ವಿವಾಹ ಮಾಡುತ್ತಿರುವುದು, ವಿವಾಹ ವಿಚ್ಛೇದನದಿಂದ ಕುಟುಂಬ ಪದ್ಧತಿ ಶಿಥಿಲವಾಗುತ್ತಿದೆ. ಸಂತತಿ ಅತಿಯಾದ ನಿಯಂತ್ರಣದಿಂದ ಹಿಂದೂ ಸಮಾಜ ಶಿಥಿಲವಾಗುತ್ತಿದೆ. ಹಿಂದೂ ಸಮಾಜದ ಜನಸಂಖ್ಯೆ ಹೆಚ್ಚಬೇಕಾಗಿದೆ. ಹಿಂದೂ ಸಮಾಜ ಹಿಂದೇ ಹೋಗದೇ, ಹಿಂದುಸ್ತಾನವಾಗಿ ಉಳಿಸಬೇಕು ಎಂದು ಹೇಳಿದರು. ಸೋಂದಾ ಜೈನ ಮಠದ ಭಟ್ಟಾಕಳಂಕ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಅರಿಷಡ್‌ ವರ್ಗಗಳಾದ ಕಾಮ, ಕ್ರೋಧ, ಮೋಹ, ಲೋಭ, ಮದ, ಮಾತ್ಸರ್ಯಗಳನ್ನು ತೊರೆದು, ಉತ್ತಮ ಜೀವನಕ್ಕೆ ಮುಂದಡಿಯಿಡಲು ಯುಗಾದಿಯ ಪರ್ವಕಾಲ ಸಕಾಲವಾಗಿದೆ ಎಂದರು.

ಬಣ್ಣದಮಠದ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚ ನೀಡಿ, ನಮ್ಮ ಮೂಲ ಬೇರನ್ನು ಮರೆತು ಉಳಿದೆಡೆ ಕೈ ಚಾಚುತ್ತಿದ್ದೇವೆ. ಪಾಶ್ಚಾತ್ಯ ಸಂಸ್ಕೃತಿಯಿಂದ ನಮ್ಮ ಮೂಲ ಶಿಕ್ಷಣ ಪದ್ಧತಿಯೇ ಕಣ್ಮರೆಯಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಪಾಶ್ಚಾತ್ಯರು ನಮ್ಮ ಸಂಸ್ಕೃತಿಯತ್ತ ಮುಖ ಮಾಡುತ್ತಿದ್ದಾರೆ. ನಮ್ಮವರು ವಿಮುಖರಾಗುತ್ತಿರುವುದು ವಿಷಾದನೀಯ ಸಂಗತಿ ಎಂದರು.

ಧರ್ಮದಿಂದ ಎಲ್ಲವನ್ನೂ ಜಯಿಸಲು ಸಾಧ್ಯ. ಆದ್ದರಿಂದ ಧರ್ಮ ಪ್ರಚಾರ ಕಾರ್ಯದಲ್ಲಿ ಹೆಚ್ಚಾಗಿ ತೊಡಗಬೇಕು. ಸತ್ಕಾರ್ಯಗಳು ಹೆಚ್ಚಾದಂತೆ ಸಮಾಜದಲ್ಲಿನ ವಿಕೃತಿಗಳ ಪ್ರಮಾಣ ಕ್ಷೀಣಿಸುತ್ತದೆ. ಹೆಚ್ಚುತ್ತಿರುವ ಭಯೋತ್ಪಾದನೆ ವಿನಾಶದ ದಾರಿಯನ್ನು ತೋರಿಸುತ್ತದೆ. ಇದರ ಕುರಿತಾಗಿ ಪ್ರತಿಯೊಬ್ಬರೂ ಜಾಗ್ರತರಾಗಬೇಕು ಎಂದರು.

ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ್ ದುಭಾಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುಗಾದಿ ಉತ್ಸವ ಸಮಿತಿ ಗೌರವಾಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಮತ್ತಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಆನಂತರ ಬೃಹತ್ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ೫೦ಕ್ಕೂ ಹೆಚ್ಚಿನ ವಿವಿಧ ವಿನ್ಯಾಸದ ಸ್ತಬ್ಧಚಿತ್ರಗಳು ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ
ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ