ಕನ್ನಡಪ್ರಭ ವಾರ್ತೆ ಸೊರಬ
ಸೋಮವಾರ ತಾಲೂಕಿನ ಮೂಡದೀವಳಿಗೆ ಗ್ರಾಮದಲ್ಲಿ ಕ್ಷತ್ರಿಯ ಮರಾಠ ಸಮಾಜದವರು ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 397ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮ ಭಾರತವನ್ನು ತಮ್ಮ ಆಳ್ವಿಕೆಗೆ ತಂದು ಕೀರ್ತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ. ಈ ಕಾರಣದಿಂದ ಅವರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು. ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಮತ್ತು ಸಾಧನೆ ಮಹತ್ವದ ಕುರಿತು ಮಾಹಿತಿ ನೀಡಿದರು.ಈ ಸಂದರ್ಭ ಬಳ್ಳಿಬೈಲು, ಮೂಡದೀವಳಿಗೆ, ಗ್ರಾಮದ ಕ್ಷತ್ರಿಯ ಮರಾಠ ಸಮಾಜದವರು ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಿಹಿ ವಿತರಣೆ ಮಾಡಿ ಸಂಭ್ರಮಿಸಿದರು. ಅನಂತರ ಜೈ ಶಿವಾಜಿ, ಜೈ ಭವಾನಿ, ಛತ್ರಪತಿ ಶಿವಾಜಿ ಮಹಾರಾಜ್ ಕೀ ಜೈ ಎಂಬ ಘೋಷಣೆಗಳನ್ನು ಮೊಳಗಿಸಿದರು. ಬಳ್ಳಿಬೈಲು ಗ್ರಾಮದಿಂದ ಮೂಡದೀವಳಿಗೆ, ಚನ್ನಪಟ್ಟಣ, ಮಾರ್ಗವಾಗಿ ಚಂದ್ರಗುತ್ತಿ ಮುಖ್ಯರಸ್ತೆ, ರಥಬೀದಿ ಸೇರಿದಂತೆ ಕಮಲಾಪುರ ಗ್ರಾಮದವರೆಗೆ ಬೈಕ್ ರ್ಯಾಲಿ ನಡೆಸಿದರು.
- - - -19ಕೆಪಿಸೊರಬ04:
ಸೊರಬ ತಾಲೂಕಿನ ಮೂಡದೀವಳಿಗೆ ಗ್ರಾಮದಲ್ಲಿ ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 397ನೇ ಜಯಂತಿ ಆಚರಿಸಲಾಯಿತು.