ಕನ್ನಡಪ್ರಭ ವಾರ್ತೆ ಗೌರಿಬಿದನೂರು
ನಂತರ ಮಾತನಾಡಿದ ಅವರು, ಪ್ರತಿಯೊಂದು ಮಗುವು ದೇಶದ ಒಬ್ಬೊಬ್ಬ ವಿಜ್ಞಾನಿ. ವಿದ್ಯಾರ್ಥಿಗಳು, ಕಲಿಕಾ ಹಂತದಿಂದಲೇ, ಜೀವನದಲ್ಲಿ ವಿಜ್ಞಾನವನ್ನು ಅಳವಡಿಸಿಕೊಳ್ಳಬೇಕು, ಶಾಲಾ ಹಂತದಿಂದಲೇ ಶಿಕ್ಷಕರಿಂದ ಮಾರ್ಗದರ್ಶನ ಪಡೆದು ವಿಜ್ಞಾನದ ವಿವಿಧ ಪ್ರಯೋಗಗಳನ್ನು ಮಾಡುವ ಆಸಕ್ತಿ ಬೆಳೆಸಿಕೊಳ್ಳಬೇಕು, ಆಗ ಮಾತ್ರ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ ಎಂದರು.
ವೈಜ್ಞಾನಿಕ ಮನೋಭಾವ:ಕಾರ್ಯದರ್ಶಿ ನಂಜೇಗೌಡ ಮಾತನಾಡಿ, ವೈಜ್ಞಾನಿಕ ಅನ್ವೇಷಣೆಗಳು ಜಗತ್ತನ್ನೇ ಬದಲಿಸುವಷ್ಟು ಶಕ್ತಿ ಹೊಂದಿವೆ, ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳ ಬೇಕು, ವೈಜ್ಞಾನಿಕ ಅಂಶಗಳನ್ನು ಅರಿತು ಬದುಕಿನ ಪ್ರತಿ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ, ಸಿ ಆರ್ ಪಿ ನವೀನ್ ಕುಮಾರ್, ಪ್ರಾಧ್ಯಾಪಕ ರಾಮಪ್ಪ, ಶಿಕ್ಷಕರಾದ, ವರದರಾಜು, ವಿನಯ್, ಮಂಜುನಾಥ್, ಗೌಸಿಯಾಖಾನಂ, ಶ್ರೀನಿವಾಸ್, ನೂರ್ ಆಯಿಷಾ, ವೈಶಾಲಿ, ಪೋಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.