ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಶೈಲೇಶ ಪರಮಾನಂದಕನ್ನಡಪ್ರಭ ವಾರ್ತೆ ದಾಂಡೇಲಿ
ಹಳೇ ನಗರಸಭೆಯ ಮೈದಾನದಲ್ಲಿ ೭೭ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದಾಂಡೇಲಿ ಎಲ್ಲ ಧರ್ಮದ ಜನರು ಶಾಂತಿಯುತವಾಗಿ ಬದುಕುತ್ತಿರುವ ನಗರವಾಗಿದ್ದು, ಇಲ್ಲಿ ದೇಶದ ವಿವಿಧ ರಾಜ್ಯಗಳು ನಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದ ಅವರು, ತಾಲೂಕಾಡಳಿತ ಹಾಗೂ ನಗರಸಭೆಯಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇನ್ನು ತೆರಿಗೆ ಸಂಗ್ರಹ, ಮೂಲಭೂತ ಸೌಕರ್ಯ ನೀಡುವಲ್ಲಿ ಉತ್ತಮ ಪ್ರಗತಿ ಕಾಣುತ್ತಿದೆ. ನಗರದ ನೈರ್ಮಲ್ಯಕ್ಕೆ ನಾಗರಿಕರು ಸಹಕರಿಸಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಪೌರಾಯುಕ್ತ ವಿವೇಕ ಬನ್ನೆ, ಡಿವೈಎಸ್ಪಿ ಶಿವಾನಂದ ಮದರಕಂಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಸಿ. ಹಾದಿಮನಿ, ಪಂಚಗ್ಯಾರಂಟಿ ಯೋಜನೆ ಅಧ್ಯಕ್ಷ ರಿಯಾಜ ಸಯ್ಯದ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ, ಸಿಪಿಐ ಶಿವಾನಂದ ಅಂಬಿಗೇರ ಇದ್ದರು.ಶಿಕ್ಷಕ ಸೀತಾರಾಮ ನಾಯ್ಕ ನಿರೂಪಿಸಿದರು. ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ ವಂದಿಸಿದರು.
ಕಾರ್ಯಕ್ರಮದಲ್ಲಿ ನಗರ ಶಾಲಾಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷರು, ಪ್ರಾಚಾರ್ಯರು, ನಗರದ ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.ನಗರದಲ್ಲಿ ವಿವಿಧೆಡೆ ಗಣರಾಜ್ಯೋತ್ಸವ ಆಚರಣೆ:
ಅಂಬೇವಾಡಿಯಲ್ಲಿರುವ ವಿಧಾನಸೌಧ, ಅರಣ್ಯ ಇಲಾಖೆ ಕಚೇರಿ, ನಗರದ ಎಲ್ಲ ಸರ್ಕಾರಿ ಕಚೇರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಕೇಂದ್ರ ಕಚೇರಿಯಲ್ಲಿ, ಕರ್ನಾಟಕ ಸಂಘ, ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆ, ಅಂಬೇವಾಡಿಯ ಸರಕಾರಿ ಪದವಿ ಕಾಲೇಜು, ಹಳೆ ದಾಂಡೇಲಿಯ ಪದವಿ ಪೂರ್ವ ಕಾಲೇಜು, ದಾಂಡೇಲಿ ಶಿಕ್ಷಣ ಸಂಸ್ಥೆಯ ಬಂಗೂರನಗರ ಪದವಿ ಹಾಗೂ ಪದವಿ ಪೂರ್ವ ಕಾಲೇಜು, ಜನತಾ ವಿದ್ಯಾಲಯ, ಕೆನರಾ ಬಿಇಡಿ ಕಾಲೇಜು, ಅಂಬೇವಾಡಿ ಆಶಾಕಿರಣ ಐಟಿಐ, ಕನ್ಯಾವಿದ್ಯಾಲಯ, ತೌಹಿದ ಕಾಲೇಜು, ನಗರದ ಎಲ್ಲ ಬ್ಯಾಂಕುಗಳಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.