ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಲಿ

KannadaprabhaNewsNetwork |  
Published : Sep 26, 2025, 01:00 AM IST
25ಕೆಪಿಎಲ್21 ಸ್ವಚ್ಛತೆಯೇ ಸೇವೆ-2025ರ ಸ್ವಚ್ಛೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ  ಅಧಿಕಾರಿ ವರ್ಗ ಸ್ವಚ್ಛ ಮಾಡುತ್ತಿರುವುದು25ಕೆಪಿಎಲ್22 ಸ್ವಚ್ಛತೆಯೇ ಸೇವೆ-2025ರ ಸ್ವಚ್ಛೋತ್ಸವ ಕಾರ್ಯಕ್ರಮ ಜಾಗೃತಿ | Kannada Prabha

ಸಾರಾಂಶ

ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯಬಾರದು. ಅದನ್ನು ಹಸಿಕಸ ಮತ್ತು ಒಣ ಕಸವನ್ನಾಗಿ ವಿಂಗಡಿಸುವ ಮೂಲಕ ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಡಬೇಕು

ಕೊಪ್ಪಳ: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸೆ.17 ರಿಂದ ಅ.2 ರವರೆಗೆ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿದ್ದು, ಸ್ವಚ್ಛತೆ ನಮ್ಮ ಮನೆಯಿಂದಲೇ ಆಗಬೇಕು ಎನ್ನುವ ಉದ್ದೇಶದಿಂದ ಇಂದು ನಮ್ಮ ಕಚೇರಿ ಆವರಣದಿಂದಲೇ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಕೊಪ್ಪಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ-2025ರ ಸ್ವಚ್ಛೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯಬಾರದು. ಅದನ್ನು ಹಸಿಕಸ ಮತ್ತು ಒಣ ಕಸವನ್ನಾಗಿ ವಿಂಗಡಿಸುವ ಮೂಲಕ ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಡಬೇಕು. ಸಾರ್ವಜನಿಕರು ಕಸ ಬಿಸಾಕುವ ಸ್ಥಳಗಳಲ್ಲಿ ರಂಗೋಲಿ ಬಿಡಿಸುವ ಮೂಲಕ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಇಂದು ಒಂದು ದಿನ ಒಂದು ಗಂಟೆ ಸ್ವಚ್ಛತಾ ಕಾರ್ಯಕ್ರಮ ನಗರದ ಸ್ಥಳೀಯ ಸಂಸ್ಥೆ ಮತ್ತು ಗ್ರಾಪಂ ವ್ಯಾಪ್ತಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಆರೋಗ್ಯವಂತ ಸಮಾಜಕ್ಕೆ ಸ್ವಚ್ಛತೆ ಬಹಳ ಮುಖ್ಯವಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಜಿಲ್ಲೆಯ 153ಗ್ರಾಪಂಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾವೆಲ್ಲರೂ ಸ್ವಚ್ಛ ಪರಿಸರಕ್ಕೆ ಒತ್ತು ನೀಡಬೇಕಿದೆ. ಇದಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್. ಎಲ್ ಅರಸಿದ್ದಿ ಮಾತನಾಡಿ, ಸ್ವಚ್ಛತೆ ನಿರಂತರ ಪ್ರಕ್ರಿಯೆ, ಇದು ಒಂದು ದಿನದ ಕೆಲಸ ಅಲ್ಲ. ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಆಗಾಗ್ಗೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಸ್ವಚ್ಛತೆಯಿದ್ದರೆ ನಮಗೆ ಯಾವುದೇ ರೋಗ ರುಜಿನ ಬರುವುದಿಲ್ಲ ಹಾಗಾಗಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಹೇಳಿದರು.

ಜಿಪಂ ಯೋಜನಾ ನಿರ್ದೆಶಕ ಪ್ರಕಾಶ ವಿ.ಸ್ವಚ್ಛತೆಯೇ ಸೇವೆ ಪ್ರತಿಜ್ಞೆ ವಿಧಿ ಬೋಧಿಸಿದರು. ಜಿಲ್ಲಾಡಳಿತ ಭವನದ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ವಚ್ಛತಾ ಕಾರ್ಯ ನಡೆಸಿದರು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಜಗದೀಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ನಾಗಮಣಿ ಹೊಸಮನಿ, ಜಿಲ್ಲಾ ವಾರ್ತಾಧಿಕಾರಿ ಡಾ. ಸುರೇಶ್ ಜಿ., ಕೊಪ್ಪಳ ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪೌರ ಕಾರ್ಮಿಕರು ಸೇರಿದಂತೆ ಇತರರು ಭಾಗವಹಿಸಿದ್ದರು.

PREV

Recommended Stories

ಕಾಸರಗೋಡಲ್ಲಿ ಕನ್ನಡ ಫಲಕ: ಕೇರಳಕ್ಕೆ ಕೇಂದ್ರ ನಿರ್ದೇಶನ
ಒಂದು ತಿಂಗಳಾದ್ರೂ ಬೈಕ್‌ ಟ್ಯಾಕ್ಸಿಗೆ ನೀತಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ