ವೀರಶೈವ ಲಿಂಗಾಯತ ಸಂಘದ ಉನ್ನತಿಗೆ ಗ್ರಾಹಕರು ಸ್ಪಂದಿಸಲಿ: ರವಿಕುಮಾರ್

KannadaprabhaNewsNetwork |  
Published : Sep 22, 2025, 01:00 AM IST
21ಎಚ್ಎಸ್ಎನ್10 : ವೀರಶೈವ ಲಿಂಗಾಯಿತ ಜನೋಪಯೋಗಿ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ರಾಜ್ಯ ಸೌಹಾರ್ದ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಅಶೋಕ್ ಉದ್ಘಾಟಿಸಿದರು.  | Kannada Prabha

ಸಾರಾಂಶ

ರಾಜ್ಯದಲ್ಲಿ 6 ಸಾವಿರ ಸೌಹಾರ್ದ ಸಹಕಾರಿ ಸಂಘಗಳಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿವೆ. ಇಲ್ಲಿಯ ಸಂಘದ ಕಾರ್ಯನಿರ್ವಹಣೆ ಉತ್ತಮವಾಗಿದೆ.

ಅರಕಲಗೂಡು: ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರಿ ಸಂಘ 2024- 25ನೇ ಸಾಲಿಗೆ 4 ಲಕ್ಷ ರು. ನಿವ್ವಳ ಲಾಭ ಗಳಿಸಿ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದು ಸಂಘದ ಅಧ್ಯಕ್ಷ ಎನ್. ರವಿಕುಮಾರ್ ತಿಳಿಸಿದರು. ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಹಕರಿಗೆ ವಿವಿಧ ಉದ್ದೇಶಗಳಿಗಾಗಿ ಸಂಘವು 100 ಕೋಟಿ ರು. ಸಾಲ ನೀಡಿದೆ. ಗ್ರಾಹಕರ ಅನುಕೂಲಕ್ಕಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿದ್ದು ಮುಂದಿನ ದಿನಗಳಲ್ಲಿಯೂ ಉತ್ತಮ ಸೇವೆ ನೀಡುವ ಉದ್ದೇಶ ಹೊಂದಿದೆ. ಸಂಘದ ಉನ್ನತಿಗೆ ಗ್ರಾಹಕರು ಸ್ಪಂದಿಸಬೇಕು ಎಂದು ಮನವಿ ಮಾಡಿದರು. ಪಟ್ಟಣದ ಮಲ್ಲಿಪಟ್ಟಣ ರಸ್ತೆಯಲ್ಲಿ ಹೊಸದಾಗಿ ಸ್ಥಾಪಿಸಿರುವ ಕಚೇರಿ ಹಾಗೂ ಸಿಎಸ್‌ಸಿ ಕೇಂದ್ರವನ್ನು ಸೆ. 26ರಂದು ಉದ್ಘಾಟಿಸಲಾಗುವುದು ಎಂದರು. ರಾಜ್ಯ ಸೌಹಾರ್ದ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಅಶೋಕ್ ಮಾತನಾಡಿ, ರಾಜ್ಯದಲ್ಲಿ 6 ಸಾವಿರ ಸೌಹಾರ್ದ ಸಹಕಾರಿ ಸಂಘಗಳಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿವೆ. ಇಲ್ಲಿಯ ಸಂಘದ ಕಾರ್ಯನಿರ್ವಹಣೆ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರಿ ಸಂಘದ ಕಾರ್ಯದರ್ಶಿ ಶಶಿಕಲಾ ಆಯವ್ಯಯ ಮಂಡಿಸಿದರು. ಹೊಳೆನರಸೀಪುರ ಶಿವಕುಮಾರ ಸ್ವಾಮೀಜಿ, ಸಹಕಾರಿ ಸಂಘದ ಅಧ್ಯಕ್ಷ ಸುರೇಶ್, ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಯೋಗೇಶ್, ರುದ್ರಪ್ಪ, ಧರ್ಮ, ಮಹಾದೇವು, ವಿರೂಪಾಕ್ಷ, ಸುಂದರೇಶ್, ಹೇಮಲತಾ, ಸುನಿತಾ ಲೋಕೇಶ್, ವಾಗೀಶ್, ಬಿ.ಪಿ. ವೀರೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ