ರಾಣಿಬೆನ್ನೂರು: ಸಂಸ್ಕಾರ, ಸಂಸ್ಕೃತಿ ಬಹಳ ಮುಖ್ಯ. ಮಠ- ಮಂದಿರಗಳಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಇರುವ ದೇಶ ಸಮೃದ್ಧಿಯಾಗಿರುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.ತಾಲೂಕಿನ ಕಾಕೋಳ ಗ್ರಾಮದಲ್ಲಿ ಗುರುವಾರ ಪ್ರಭುಸ್ವಾಮಿ ಮಠದ ಗುರುಶರಣ ಬಸವೇಶ್ವರರ 156ನೇ ಪುಣ್ಯಾರಾಧನೆ, ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಅಂಗವಾಗಿ ಏರ್ಪಡಿಸಿದ್ದ ಧರ್ಮಸಭೆ ಉದ್ಘಾಟಿಸಿ ಮಾತನಾಡಿ, ಮಾನವ ಧರ್ಮ ಮುಖ್ಯವಾಗಿದ್ದು, ಆದರ್ಶ ಜೀವನ ನಡೆಸಿದಾಗ ಮಾತ್ರ ಬದುಕು ಸುಂದರವಾಗುತ್ತದೆ ಎಂದರು.
ಹಾವೇರಿ: ಇ- ಖಾತಾ ಅಭಿಯಾನಕ್ಕೆ ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ನಗರಸಭೆ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು.
ಸರ್ಕಾರ ಇ- ಆಸ್ತಿ ತಂತ್ರಾಶದ ಬಳಕೆ ಕಡ್ಡಾಯಗೊಳಿಸಿದೆ. ಆದ್ದರಿಂದ ನಗರಸಭೆಯ ವ್ಯಾಪ್ತಿಯ ಎಲ್ಲ ರೀತಿಯ ಕಟ್ಟಡ, ನಿವೇಶನಗಳಿಗೆ ಆಸ್ತಿ ತೆರಿಗೆ ನಿರ್ಧರಣೆಗೊಳಿಸಿ ಆಸ್ತಿ ತೆರಿಗೆಯನ್ನು 2024- 25ನೇ ಸಾಲಿನ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ಅವಶ್ಯಕ ದಾಖಲೆಗಳನ್ನು ಪಡೆದು ಕರ್ನಾಟಕ ಪುರಸಭೆಗಳ ಅಧಿನಿಯಮದ ಪ್ರಕಾರ ಅನಧಿಕೃತ ಸ್ವತ್ತುಗಳನ್ನು ಮಾಹಿತಿಯುಳ್ಳ ವಹಿಯನ್ನು ನಿರ್ವಹಿಸಬೇಕಾಗಿರುತ್ತದೆ ಎಂದರು.ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಸದಸ್ಯರಾದ ಸಂಜೀವಕುಮಾರ ನೀರಲಗಿ, ಗಣೇಶ ಬಿಷ್ಟಣ್ಣನವರ ಇತರರು ಉಪಸ್ಥಿತರಿದ್ದರು.