ಬರಗಾಲವನ್ನು ರಾಷ್ಟೀಯ ವಿಪತ್ತೆಂದು ಘೋಷಿಸಲಿ

KannadaprabhaNewsNetwork |  
Published : Jan 20, 2024, 02:04 AM IST
19ಕೆಬಿಪಿಟಿ.1.ಬಂಗಾರಪೇಟೆ ಪಟ್ಟಣದಲ್ಲಿ ಪ್ರಾಂತ ರೈತ ಸಂಘದ ಸದಸ್ಯರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡಿದರು. | Kannada Prabha

ಸಾರಾಂಶ

ಮುಂಗಾರು ವೈಫಲ್ಯದಿಂದ ಉಂಟಾದ ಬರಗಾಲ, ನಂತರದ ಯಾವ ಮಳೆ ಋತುವಿನಲ್ಲೂ ಉಪಶಮನ ಕಾಣದೇ ಮುಂದುವರೆಯುತ್ತಾ ಬಂದಿರುವುದು ರೈತಾಪಿ ಸಮುದಾಯದ ಸಂಕಟವನ್ನು ದಿನೇ ದಿನೇ ಉಲ್ಬಣಗೊಳ್ಳುವಂತೆ ಮಾಡುತ್ತಿದೆ

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ರಾಜ್ಯ ಎದುರಿಸುತ್ತಿರುವ ಭೀಕರ ಬರಗಾಲವನ್ನು ರಾಷ್ಟೀಯ ವಿಪತ್ತು ಎಂದು ಘೋಷಿಸಬೇಕೆಂದು ಒತ್ತಾಯಿಸಿ ಪ್ರಾಂತ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ಈ ವೇಳೆ ಮಾತನಾಡಿದ ಕೆಪಿಆರ್‌ಎಸ್ ನ ಜಂಟಿ ಕಾರ್ಯದರ್ಶಿ ಟಿ.ಅಪ್ಪಯ್ಯಣ್ಣ, ರಾಜ್ಯ ಎಂದೂ ಕಂಡರಿಯದ ಬರಗಾಲಕ್ಕೆ ಸಿಲುಕಿ ಒದ್ದಾಡುತ್ತಿದೆ. ರಾಜ್ಯ ಸರ್ಕಾರವೇ ೨೩೬ ತಾಲೂಕುಗಳ ಪೈಕಿ ೨೨೩ ತಾಲೂಕುಗಳು ತೀವ್ರ ಬರಪೀಡಿತ ತಾಲೂಕುಗಳು ಎಂದು ಘೋಷಿಸಿದೆ. ಕೃಷಿ ಇಲಾಖೆ ವರದಿ ಪ್ರಕಾರ ಸುಮಾರು ಐವತ್ತು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಎಂದರು.

ಹೆಚ್ಚುತ್ತಿರುವ ರೈತರ ಸಂಕಷ್ಟ

ಮುಂಗಾರು ವೈಫಲ್ಯದಿಂದ ಉಂಟಾದ ಬರಗಾಲ, ನಂತರದ ಯಾವ ಮಳೆ ಋತುವಿನಲ್ಲೂ ಉಪಶಮನ ಕಾಣದೇ ಮುಂದುವರೆಯುತ್ತಾ ಬಂದಿರುವುದು ರೈತಾಪಿ ಸಮುದಾಯದ ಸಂಕಟವನ್ನು ದಿನೇ ದಿನೇ ಹೆಚ್ಚು ಉಲ್ಬಣಗೊಳ್ಳುವಂತೆ ಮಾಡುತ್ತಿದೆ ಆದ್ದರಿಂದ ರಾಷ್ಟೀಯ ವಿಪತ್ತು ಎಂದು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.ಬೇಡಿಕೆಗಳು:ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕು, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬರ ಪರಿಹಾರವನ್ನು ಒದಗಿಸಬೇಕು. ಒಂದು ಹೆಕ್ಟರ್‌ಗೆ ಬೆಳೆ ನಷ ಪರಿಹಾರವಾಗಿ ೫೦,೦೦೦ ರೂ ನೀಡಬೇಕು, ಇಡೀ ರಾಜ್ಯವನ್ನು ಸಂಪೂರ್ಣ ಬರಗಾಲ ಪಿಡೀತ ಪ್ರದೇಶ ಎಂದು ಘೋಷಿಸಬೇಕು. ಬರಗಾಲ ಘೋಷಣೆಗೆ ಸಂಬAಧಿಸಿ, ಕೇಂದ್ರ ಸರ್ಕಾರವು ತನ್ನ ವಸಾಹತುಶಾಹಿ ಕಾಲಘಟ್ಟದ ಮಾನದಂಡಗಳಿಗೆ ಬದಲಿಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನದಂಡಗಳನ್ನು ರೂಪಿಸಬೇಕು.

ರಾಜ್ಯದಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಕ್ರಮ ವಹಿಸಬೇಕು. ಟ್ಯಾಂಕರ್ ನೀರಿನ ಮಾರಾಟದ ಮೇಲೆ ನಿಯಂತ್ರಣ ಸಾಧಿಸಬೇಕು, ತಕ್ಷಣವೇ ಬಿಪಿಎಲ್ - ಎಪಿಎಲ್ ತಾರತಮ್ಯ ಇಲ್ಲದೇ ಬರಗಾಲ ಪರಿಹಾರ ರೇಷನ್ ವಿತರಣೆಯಲ್ಲಿ ಹೆಚ್ಚುವರಿ ಆಹಾರ ಧಾನ್ಯ ಒದಗಿಸಬೇಕು. ಆಹಾರ ಧಾನ್ಯಗಳ ಬೆಲೆ ಏರಿಕೆ ಮೇಲೆ ಕಡಿವಾಣ ವಿಧಿಸಬೇಕು,

ನೋಡಲ್‌ ಅಧಿಕಾರಿ ನೇಮಿಸಿ

ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಬೇಕು. ಮೇವು ಕುಂದು ಕೊರತೆ ಪರಿಹರಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು, ಕೂಡಲೇ ಕೇಂದ್ರ ಸರ್ಕಾರವು, ಎಲ್ಲಾ ರೈತರ, ಕೃಷಿ ಕೂಲಿಕಾರರ, ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಹಾಗೂ ಬಡ್ಡಿ ಮನ್ನಾ ಮಾಡಬೇಕು. ಎಲ್ಲಾ ರೀತಿಯ ಸಾಲ ವಸೂಲಾತಿಯನ್ನು ನಿಷೇಧಿಸಿ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಖಜಾಂಚಿ ಎ.ಪಿಚ್ಚಕಣ್ಣು, ಗ್ರಾ.ಪಂ ಸದಸ್ಯ ಜಿ.ಗಣೇಶನ್, ಮುಖಂಡ ಹನುಮಂತರಾಯ, ಸಹ ಕಾರ್ಯದರ್ಶಿ ವಿ.ಸೋಮಶೇಖರ್, ತಾಲ್ಲೂಕು ಮುಖಂಡ ಬಿ.ಎಲ್.ಕೇಶವರಾವ್, ವಿ.ವೆಂಕಟೇಶಪ್ಪ ಹಾಗೂ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರದಿಂದ ಹೊರಡೋ ಈ ರೈಲಿನ ಮಾರ್ಗ ಬದಲಾವಣೆ
ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!