ಕನ್ನಡಪ್ರಭ ವಾರ್ತೆ ವಿಜಯಪುರ
ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿದ ಅವರು, ವಿಬಿ-ಜಿ ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಪ್ರಗತಿ ಪರಿಶೀಲಿಸಿದರು. ವಿ.ಜಿ. ರಾಮ್ ಜಿ. ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಉದ್ಯೋಗ ಸೃಜನೆಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ 100ಕ್ಕಿಂತ ಕಡಿಮೆ ಸಂಖ್ಯೆಯ ಕೂಲಿಕಾರರು ಉದ್ಯೋಗದಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿಯೇ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಾರಣ ಕೇಳುವ ನೋಟಿಸ್ ಜಾರಿ ಮಾಡಿ, ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಷ್ಟಿಸುವ ಮೂಲಕ ಬಡ ಮತ್ತು ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಳಿಕ ಬೋಳಚಿಕ್ಕಲಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾತ್ರಾಳ ಕೆರೆಯ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಿಇಒ ಅವರು, ಕೂಲಿಕಾರ್ಮಿಕರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈಗಾಗಲೇ ಕೆಲಸ ನಿರ್ವಹಿಸಿರುವ ಕಾರ್ಮಿಕರಿಗೆ ಕೂಲಿ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಯುವಜನರನ್ನು ಸಂಘಟಿಸಿ ಸಾಮಾಜಿಕ ಸಾಮರಸ್ಯ ಹಾಗೂ ಸಮುದಾಯ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯಕ್ಕೆ ವೇಗ ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಇಂದೇ ಕನಿಷ್ಠ 100 ಯುವಕರನ್ನು ನೋಂದಾಯಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಓಗಳಿಗೆ ಸೂಚಿಸಿದರು.