ಪ್ರತಿ ಮನುಷ್ಯ ಪರಿಸರದ ರಕ್ಷಕನಾಗಲಿ: ಡಾ. ಅನ್ನದಾನೀಶ್ವರ ಸ್ವಾಮೀಜಿ

KannadaprabhaNewsNetwork |  
Published : Aug 03, 2026, 02:15 AM IST
ಕಾರ್ಯಕ್ರಮವನ್ನ ಗ್ರಾಪಂ ಮಾಜಿ ಉಪಾಧ್ಯಕ್ಷ ರಾಮಣ್ಣ ಮೇಗಲಮನಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರತಿಯೊಬ್ಬರೂ ಪರಿಸರ ಉಳಿಸಿ ಬೆಳೆಸುವುದಕ್ಕೆ ಆದ್ಯತೆ ನೀಡಬೇಕು.

ಮುಂಡರಗಿ: ಪ್ರತಿ ಮನುಷ್ಯ ಪರಿಸರದ ರಕ್ಷಕನಾಗಬೇಕು. ಅಂದಾಗ ಮಾತ್ರ ಮುಂದಿನ ಪೀಳಿಗೆಯನ್ನು ಅದು ರಕ್ಷಣೆ ಮಾಡುತ್ತದೆ. ಪರಿಸರ ಸಂರಕ್ಷಣೆ ಅದು ಕೇವಲ ಮಾತಾಗಬಾರದು. ಅದು ಕೃತಿಯಲ್ಲಿ ಬರಬೇಕು. ಕಪ್ಪತಗುಡ್ಡದಲ್ಲಿ ನೂರಾರು ವನಸ್ಪತಿ ಸಸ್ಯಗಳು ದೊರೆಯುತ್ತವೆ. ಕಪ್ಪತಗುಡ್ಡದ ಶ್ರೇಷ್ಠತೆ ಅರಿಯಬೇಕು ಎಂದು ಡಾ. ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.

ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಕನ್ನಡ ಸಾಹಿತ್ಯ ಭವನದಲ್ಲಿ ತಾಲೂಕು ಕಸಾಪ ಹಾಗೂ ಕಪ್ಪತಗುಡ್ಡ ವಲಯದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಪರಿಸರ ಉಳಿಸಿ ಬೆಳೆಸುವುದಕ್ಕೆ ಆದ್ಯತೆ ನೀಡಬೇಕು ಎಂದರು.

ಶಿಂಗಟರಾಯನಕೇರಿ ಗ್ರಾಪಂ ಮಾಜಿ ಉಪಾಧ್ಯಕ್ಷ ರಾಮಣ್ಣ ಮೇಗಲಮನಿ ಮಾತನಾಡಿ, ಪ್ರತಿಯೊಬ್ಬರೂ ಪರಿಸರ ಉಳಿವಿಗಾಗಿ ವಿಶೇಷ ಕಾಳಜಿ ವಹಿಸಬೇಕು. ಪರಿಸರ ನಾಶ ಮಾಡುವವರಿಗೆ ತಿಳಿವಳಿಕೆ ನೀಡಬೇಕು. ಪರಿಸರ ಸಂರಕ್ಷಣೆಯ ಕೆಲಸ ಆಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕಾಧ್ಯಕ್ಷ ಎಂ.ಜಿ. ಗಚ್ಚಣ್ಣವರ ಮಾತನಾಡಿ, ತಾಲೂಕು ಕಸಾಪನಿಂದ ಹಲವಾರು ಕಾರ್ಯಕ್ರಮ ಆಯೋಜಿಸಲಾಗಿದೆ. ಅದಕ್ಕೆ ಪ್ರತಿಯೊಬ್ಬರ ಸಹಕಾರ ದೊಡ್ಡದಿದೆ. ಇನ್ನೂ ಅನೇಕ ಸಾಹಿತ್ಯಪರ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದರು.

ಈ ವೇಳೆ ಪರಿಸರ ಪ್ರೇಮಿಗಳಾದ ವಿ.ಎಫ್. ಅಂಗಡಿ, ಡಾ. ಪಿ.ಬಿ. ಹಿರೇಗೌಡರ, ಮಲ್ಲನಗೌಡ ಗೌಡರ ಹಾಗೂ ಶಿವಪ್ರಕಾಶ ನಾಗರಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಆರ್‌ಎಫ್‌ಒ ಮಂಜುನಾಥ ಮೇಗಲಮನಿ, ಡಾ. ಹಿರೇಗೌಡರ ಮಾತನಾಡಿದರು. ಮಾಜಿ ಸಚಿವ ಎಸ್.ಎಸ್. ಪಾಟೀಲ, ಆರ್.ಎಲ್. ಪೊಲೀಸಪಾಟೀಲ, ಎಸ್.ಬಿ.ಕೆ. ಗೌಡರ, ಶಂಕರ ಕುಕನೂರ, ಮಂಜುನಾಥ ಮುಧೋಳ ಸೇರಿದಂತೆ ತಾಲೂಕು ಕಸಾಪ ಪದಾಧಿಕಾರಿಗಳು, ಕವಿಗಳು, ಸಾಹಿತ್ಯಾಭಿಮಾನಿಗಳು ಇದ್ದರು. ವೀಣಾ ಪಾಟೀಲ ಸ್ವಾಗತಿಸಿದರು. ಮಂಜುಳಾ ಇಟಗಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರುಗೋಡು ತಾಲೂಕಿನಲ್ಲಿ ತೀವ್ರ ಬರ
ಕಲಾ ತರಬೇತಿಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ: ಶಿಕಾರಿ ರಾಮು