ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ-೨೦೨೬ ಉದ್ಘಾಟನೆ
ನಾದಶ್ರೀ ಕಲಾಕೇಂದ್ರದಲ್ಲಿ ದಿ. ಎನ್.ಆರ್.ನಾಯಕ ಸ್ಮರಣಾರ್ಥ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ೨೨ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ-೨೦೨೬ ಉದ್ಘಾಟಿಸಿ ಮಾತನಾಡಿದರು. ಕನ್ನಡಕ್ಕಾಗಿ ಪರಿಷತ್ತಿನಿಂದ ಕೈಗೊಂಡಿರುವ ವಿವಿಧ ಚಟುವಟಿಕೆಗಳನ್ನು ವಿವರಿಸಿದ ಅವರು, ಮುಂದೆಯೂ ಹಲವು ಕನ್ನಡಪರ ಕಾರ್ಯಯೋಜನೆ ಹಮ್ಮಿಕೊಳ್ಳಲಾಗುವುದು ಎಂದರು.
ಸಮ್ಮೇಳನಾಧ್ಯಕ್ಷ ಮೈಸೂರಿನ ಕವಿ ಡಾ. ಕಾ. ರಾಮೇಶ್ವರಪ್ಪ (ಸಿರಿಗಂಧ) ಮಾತನಾಡಿ, ಸಾಹಿತ್ಯ ಮತ್ತು ಸಂಸ್ಕೃತಿ ಜನಮನಗಳನ್ನು ಬೆಸೆಯುವ ಸೇತುವೆಗಳಾಗಿವೆ. ಕನ್ನಡ ಸಂಸ್ಕೃತಿ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು, ಭಾಷೆ, ಕಲೆ, ಸಾಹಿತ್ಯ, ಜಾನಪದ, ಸಂಪ್ರದಾಯ ಹಾಗೂ ಮೌಲ್ಯಗಳ ವೈವಿಧ್ಯವನ್ನು ಒಳಗೊಂಡಿದೆ ಎಂದರು. ಕನ್ನಡ ಸಂಸ್ಕೃತಿಯ ಐತಿಹಾಸಿಕ ಹಿನ್ನೆಲೆ ಹಾಗೂ ಭಾರತದ ವೈವಿಧ್ಯಮಯ ಸಂಸ್ಕೃತಿಯಲ್ಲಿ ಕನ್ನಡದ ವಿಶಿಷ್ಟ ಸ್ಥಾನವನ್ನು ವಿವರಿಸಿದರು. ಉತ್ತರ ಕನ್ನಡದ ಪ್ರಕೃತಿ, ಜೀವವೈವಿಧ್ಯ, ಜನಪದ, ಕಲೆ ಮತ್ತು ಸಾಹಿತ್ಯದ ಶ್ರೀಮಂತಿಕೆಯನ್ನು ಪ್ರಸ್ತಾಪಿಸಿದರು.ರೋಟರಿ ಕ್ಲಬ್ ಅಧ್ಯಕ್ಷ ಸಿಎ. ವಿನಾಯಕ ಹೆಗಡೆ ಮಾತನಾಡಿದರು.
ಸಾಹಿತಿ ಟಿ.ಜಿ. ಭಟ್ ಹಾಸಣಗಿ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಪಿ.ಆರ್. ನಾಯ್ಕ, ಎನ್.ಆರ್. ಗಜು, ರವೀಂದ್ರ ಭಟ್ ಸೂರಿ, ವೆಂಕಟೇಶ್ ಬೈಲೂರು, ಎಂ.ಕೆ. ಲಕ್ಷ್ಮಿ, ಸಂಧ್ಯಾ ಭಟ್, ಗಣಪತಿ ಕೊಂಡದಕುಳಿ, ನಾಗರಾಜ ನಾಯಕ ಹಾಗೂ ಮಮತಾ ನಾಯ್ಕ ಕವನ ವಾಚಿಸಿದರು. ಸಾಹಿತಿ ರೋಹಿದಾಸ ನಾಯಕರ ಸೌಗಂಧಿಕ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು. ಸಮ್ಮೇಳನಾಧ್ಯಕ್ಷ ಡಾ. ಕಾ. ರಾಮೇಶ್ವರಪ್ಪ ಅವರನ್ನು ಸನ್ಮಾನಿಸಲಾಯಿತು. ಉದ್ಯಮಿ ಗಣಪತಿ ಭಾಗ್ವತ ಉಪಸ್ಥಿತರಿದ್ದರು.
ಗಾಯಕಿ ಸಂಧ್ಯಾ ಹೆಗಡೆ ಪ್ರಾರ್ಥಿಸಿದರು. ರಾಷ್ಟ್ರೀಯ ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಮಂಜುನಾಥ ಸಾಗರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರವಿ ಎಂ. ಕುಲಶೇಖರ ನಿರೂಪಿಸಿದರು. ತಾಲೂಕು ಕಸಾಪ ಅಧ್ಯಕ್ಷ ಪ್ರಮೋದ ನಾಯ್ಕ ವಂದಿಸಿದರು.