ಯಲ್ಲಾಪುರ: ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಕಾನೂನು ನೆರವು ದೊರೆಯಬೇಕು. ಆರ್ಥಿಕವಾಗಿ ಹಿಂದುಳಿದವರು ಹಾಗೂ ಕಾನೂನು ನೆರವಿನ ಅಗತ್ಯವಿರುವವರು ಯಾವುದೇ ಸಂಕೋಚವಿಲ್ಲದೆ ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ ಉಚಿತ ಕಾನೂನು ಸೇವೆ ಪಡೆಯಬಹುದು ಎಂದು ಕಾರವಾರ ಶಿರಸಿ ಪೀಠದ ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹುಲ್ಲೂರ ಹೇಮಲತಾ ಬಸಪ್ಪ ಹೇಳಿದರು.
ಫ್ರಂಟ್ ಆಫೀಸ್ನಲ್ಲಿ ಸಾರ್ವಜನಿಕರಿಗೆ ಕಾನೂನು ಸಲಹೆ, ಉಚಿತ ಕಾನೂನು ನೆರವು, ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಕಾನೂನು ಸೇವೆಗಳ ಕುರಿತು ಮಾರ್ಗದರ್ಶನ ದೊರೆಯಲಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ಕಾನೂನು ಸೇವೆಗಳನ್ನು ಸುಲಭವಾಗಿ ಪಡೆಯಲು ಅನುಕೂಲವಾಗಲಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ ಎಸ್. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿವಿಲ್ ನ್ಯಾಯಾಧೀಶೆ ಅನಿತಕುಮಾರಿ ಎಸ್., ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಭಟ್ಟ, ಅಪರ ಸರ್ಕಾರಿ ನ್ಯಾಯವಾದಿ ಎನ್.ಟಿ. ಗಾಂವ್ಕರ, ಸಹಾಯಕ ಸರ್ಕಾರಿ ಅಭಿಯೋಜಕರಾದ ಚೇತನ್ ಟಿ. ನಾಯ್ಕ, ಝೀನತಭಾನು ಶೇಖ್, ವಕೀಲರ ಸಂಘದ ಕಾರ್ಯದರ್ಶಿ ನಾಗರಾಜ ಎಂ.ಬಿ. ಹಾಗೂ ಹಿರಿಯ ನ್ಯಾಯವಾದಿಗಳು, ಪ್ಯಾನಲ್ ವಕೀಲರು, ನ್ಯಾಯಾಲಯದ ಸಿಬ್ಬಂದಿ, ಪೊಲೀಸರು ಉಪಸ್ಥಿತರಿದ್ದರು.ಇಂದು ಪ್ರಜಾ ಸೇವೆ ಅಭಿಯಾನ ಕಾರ್ಯಕ್ರಮ