ಗಾಂಧಿ ಜಯಂತಿ ಅಟ್ಟುಕಟ್ಟಾಗಿ ನಡೆಯಲಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Sep 23, 2024, 01:21 AM IST
ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಬೇರೆ ಬೇರೆ ದಿನಗಳಿಂದ ನಿಗದಿಪಡಿಸಿರುವ ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಸಿದ್ಧತೆ ಮಾಡಿಕೊಳ್ಳಬೇಕು.

ನಲಿನ್ ಅತುಲ್ ಸಲಹೆ, ಕೊಪ್ಪಳದಲ್ಲಿ ಪೂರ್ವಭಾವಿ ಸಭೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳಿಂದ ಅ. 2ರಂದು ನಡೆಯಲಿರುವ ಮಹಾತ್ಮಾ ಗಾಂಧೀಜಿ ಜಯಂತಿ ಮತ್ತು ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಬೇರೆ ಬೇರೆ ದಿನಗಳಿಂದ ನಿಗದಿಪಡಿಸಿರುವ ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಾತ್ಮಾ ಗಾಂಧೀಜಿ ಜಯಂತಿ ಹಿನ್ನೆಲೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಾತ್ಮಾ ಗಾಂಧೀಜಿ 155ನೇ ಜಯಂತಿ ಆಚರಣೆ ನಿಮಿತ್ತ ಶ್ರಮದಾನ, ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿ ಅವರ ಪ್ರಿಯ ಭಜನೆಗಳು, ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ ಮತ್ತಿತರ ವಿಷಯ ಕುರಿತು ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಬೇಕು. ವಿದ್ಯಾರ್ಥಿ ಯುವಜನರಲ್ಲಿ ಮಹಾತ್ಮಾ ಗಾಂಧೀಜಿ ಅವರ ಬದುಕು ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪಿಯು ಮತ್ತು ಪದವಿ -ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅ. 2ರಂದು ಬಹುಮಾನ ವಿತರಣೆಗೆ ಅಗತ್ಯ ಏರ್ಪಾಡು ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಶ್ರಮದಾನ ಕಾರ್ಯಕ್ರಮವನ್ನು ವಿಶೇಷವಾಗಿ ರೂಪಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗುವಂತೆ ಅಗತ್ಯ ಏರ್ಪಾಡು ಮಾಡಬೇಕು ಎಂದು ಸೂಚನೆ ನೀಡಿದರು. ಅ. 2ರಂದು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಖಾದಿ ಬಟ್ಟೆ ಧರಿಸಬೇಕು. ಖಾದಿ ಮತ್ತು ಸ್ವದೇಶಿ ವಸ್ತುಗಳ ಬಳಕೆಯ ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮತ್ತು ಕಾಲ್ನಡಿಗೆ ನಡೆಸಿ ಖಾದಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಬೇಕು ಎಂದು ಸೂಚನೆ ನೀಡಿದರು.

ಮಹಾತ್ಮಾ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆ ಅಕ್ಟೋಬರ್ ಮಾಹೆಯಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ನೈರ್ಮಲ್ಯದ ಬಗ್ಗೆ ಅರಿವು, ಅಸ್ಪೃಶ್ಯತೆ ನಿವಾರಣೆ ಜಾಗೃತಿ ಹಾಗೂ ಮದ್ಯಪಾನ ತಡೆ ಜಾಗೃತಿಗಾಗಿ ಗ್ರಾಮವೊಂದರಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮಾತನಾಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ಹಿರೇಗೌಡರ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಎಸ್. ಸುಂದರರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮಾರಬನಹಳ್ಳಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ ಕೋಕರೆ, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ನಾಗರಾಜ, ಜಿಲ್ಲಾ ವಾಲ್ಮೀಕಿ ಅಭಿವೃದ್ಧಿ ನಿಗಮದ ಮ್ಯಾನೇಜರ್ ಎಂ.ಎಸ್. ದೊಡ್ಡಮನಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!