ಕನ್ನಡಪ್ರಭ ವಾರ್ತೆ ಅಥಣಿ
ತಾಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲೂಕುಮಟ್ಟದ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು ಹಾಗೂ ಶುದ್ಧ ಕುಡಿವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕೆಂದರು.
ನರೇಗಾ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಂದು ಗ್ರಾಪಂಗಳಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸುವುದು, ಜನ ಉದ್ಯೋಗಕ್ಕಾಗಿ ಬೇರೆಡೆಗೆ ವಲಸೆ ಹೋಗದಂತೆ ಅವರಿಗೆ ಸ್ವ-ಗ್ರಾಮದಲ್ಲಿ ಉದ್ಯೋಗ ನೀಡಬೇಕು. ಈ ಕುರಿತು ಅಧಿಕಾರಿಗಳು ಸಮರ್ಪಕ ಕಾರ್ಯ ನಿರ್ವಹಿಸಬೇಕೆಂದರು. ಏ.15ರೂಳಗೆ ಪ್ರತಿಯೊಬ್ಬ ವಿಶೇಷಚೇತನರಿಗೆ ಜಾಬ್ ಕಾರ್ಡ್ಗಳನ್ನು ಕಡ್ಡಾಯವಾಗಿ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಅಥಣಿ ಗ್ರಾಮೀಣ ಗ್ರಾಪಂ ವ್ಯಾಪ್ತಿ ವಿಶೇಷಚೇತನರಿಗೆ ಜಾಬ್ ಕಾರ್ಡ್ ವಿತರಿಸಿದರು.ಅಥಣಿ ತಾಲೂಕು ಆಸ್ಪತ್ರೆಗೆ ಭೇಟಿ:
ಝಂಜರವಾಡಕ್ಕೆ ಭೇಟಿ:
ಅಥಣಿ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಪೂರೈಕೆಯಾಗುವ ಬಹುಗ್ರಾಮ ಕುಡಿವ ನೀರಿನ ಯೋಜನೆ ವೀಕ್ಷಣೆಗಾಗಿ ತಾಲೂಕಿನ ಝಂಜರವಾಡ ಗ್ರಾಪಂಗೆ ಸಿಇಒ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು. ಕೃಷ್ಣಾ ನದಿ ನೀರಿನಲ್ಲಿ ಕಾರ್ಖಾನೆಯ ಮೊಲೇಷಿಸ್ ಮಿಶ್ರಣವಾಗುತ್ತಿವೆ ಎಂಬು ದೂರುಗಳು ಬರುತ್ತವೆ. ಈ ಬಗ್ಗೆ ಅಧಿಕಾರಿಗಳು ನಿಗಾವಹಿಸಿ ಕಾರ್ಖಾನೆಯವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದರು.ಈ ವೇಳೆ ಅಥಣಿ ತಾಪಂ ಇಒ ಶಿವಾನಂದ ಕಲ್ಲಾಪುರ ಮತ್ತು ಕಾಗವಾಡ ಇಒ ವೀರಣ್ಣಾ ವಾಲಿ, ಅಥಣಿ ತಹಸೀಲ್ದಾರ್ ಸಿದ್ದರಾಯ ಭೋಸಗಿ, ಕಾಗವಾಡ ತಹಸೀಲ್ದಾರ್ ಆರ್.ಆರ್.ಬುರ್ಲಿ, ಕಾರ್ಯನಿರ್ವಾಹಕ ಅಭಿಯಂತರ ಪಾಂಡುರಂಗ ಜೋಶಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಉಪ ವಿಭಾಗ ಅಥಣಿ ರವೀಂದ್ರ ಮುರಗಾಲಿ, ಅಥಣಿ ಮತ್ತು ಕಾಗವಾಡ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಎಲ್ಲ ಸಿಬ್ಬಂದಿ ಇದ್ದರು.