ಆರೋಗ್ಯ ರಕ್ಷಣೆ ಕಾಳಜಿ ಇರಲಿ: ಲಕ್ಷ್ಮೀದೇವಮ್ಮ ಸಲಹೆ

KannadaprabhaNewsNetwork |  
Published : Jun 29, 2025, 01:33 AM IST
ಪುರಸಭೆಯ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ವಿತರಣೆ ಮಾಡುತ್ತೀರುವ ಪುರಸಭೆಯ ಅಧ್ಯಕ್ಷೆ ಲಕ್ಷ್ಮಿದೇವಮ್ಮನರಸಿಂಹಮೂರ್ತಿ, ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ ಇದ್ದಾರೆ | Kannada Prabha

ಸಾರಾಂಶ

ಚನ್ನಗಿರಿ ಪಟ್ಟಣವನ್ನು ಪ್ರತಿದಿನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಸುರಕ್ಷಾ ಪರಿಕರಗಳನ್ನು ನೀಡಲಾಗುತ್ತಿದೆ. ಇದನ್ನು ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪಟ್ಟಣದ ಸ್ವಚ್ಛತೆಗೆ ಕಾಳಜಿ ವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ ಹೇಳಿದ್ದಾರೆ.

- ಪುರಸಭೆ ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರ ವಿತರಣೆ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ಚನ್ನಗಿರಿ ಪಟ್ಟಣವನ್ನು ಪ್ರತಿದಿನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಸುರಕ್ಷಾ ಪರಿಕರಗಳನ್ನು ನೀಡಲಾಗುತ್ತಿದೆ. ಇದನ್ನು ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪಟ್ಟಣದ ಸ್ವಚ್ಛತೆಗೆ ಕಾಳಜಿ ವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ ಹೇಳಿದರು.

ಶುಕ್ರವಾರ ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಸ್ವಚ್ಛತಾ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು. ಜನರು ಮುಂಜಾನೆ ಏಳುವ ಮೊದಲೇ ಎದ್ದು ಪಟ್ಟಣದ ಸ್ವಚ್ಛತೆಯಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರು ಸಮಾಜದ ಪ್ರಾಥಮಿಕ ವೈದ್ಯರಾಗಿದ್ದಾರೆ. ಅವರ ಸುರಕ್ಷತೆ ಕಾಪಾಡುವುದು ನಮ್ಮಗಳ ಜವಾಬ್ದಾರಿ ಎಂದರು.

ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ಮಾತನಾಡಿ, ಪುರಸಭೆ ವತಿಯಿಂದ ಈ ವರ್ಷವೂ ಪೌರಕಾರ್ಮಿಕರಿಗೆ ಸುರಕ್ಷಾ ಜಾಕೆಟ್‌ಗಳು, ಸಮವಸ್ತ್ರ, ಗಮ್ ಬೂಟ್, ರೈನ್ ಕೋಟ್‌, ಮಾಸ್ಕ್, ಹೆಲ್ಮೆಟ್ ಗಳನ್ನು ವಿತರಣೆ ಮಾಡಲಾಗಿದೆ. ಪೌರಕಾರ್ಮಿಕರ ಹಿತದೃಷ್ಠಿಯಿಂದ ಸುರಕ್ಷಾ ಮತ್ತು ಸ್ವಚ್ಚತಾ ಪರಿಕರಗಳನ್ನು ವಿತರಣೆ ಮಾಡಲಾಗುತ್ತಿದ್ದು, ಸಮರ್ಪಕ ಬಳಕೆ ಮುಖ್ಯ ಎಂದರು.

ಈಗಾಗಲೇ ಸ್ವಚ್ಛತಾ ಕಾರ್ಮಿಕರಿಗೆ ಮಾಸ್ಟರ್ ಹೆಲ್ತ್ ಚೆಕಪ್, ಆಯುಷ್ಮಾನ್, ಪ್ರಧಾನಮಂತ್ರಿ ಜೀವವಿಮಾ ಸೌಲಭ್ಯ, ಗೃಹಭಾಗ್ಯ ಇತರೆ ಸೌಕರ್ಯಗಳನ್ನು ನೀಡಿದ್ದು, ಪೌರಕಾರ್ಮಿಕರ ಹಿತರಕ್ಷಣೆಗೆ ನಮ್ಮ ಇಲಾಖೆ ಬದ್ಧವಾಗಿದೆ ಎಂದರು.

ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ, ಸಹಾಯಕ ನಿರೀಕ್ಷಕ ಲೋಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್, ಸದಸ್ಯ ಅಮೀರ್ ಅಹಮದ್, ಪಿ.ಆರ್.ಮಂಜುನಾಥ್, ಕಛೇರಿಯ ವ್ಯವಸ್ಥಾಪಕ ಆರಾಧ್ಯ ಸೇರಿದಂತೆ ಪೌರಕಾರ್ಮಿಕರು ಹಾಜರಿದ್ದರು.

- - -

-27ಕೆಸಿಎನ್ಜಿ4.ಜೆಪಿಜಿ:

ಚನ್ನಗಿರಿ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ