ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಇತಿಹಾಸ ಸೃಷ್ಟಿ ಆಗಲಿ

KannadaprabhaNewsNetwork |  
Published : Mar 14, 2024, 02:00 AM IST
ವಿಜಯಪುರದಲ್ಲಿ ನಡೆದ ನೂತನವಾಗಿ ನಿರ್ಮಾಣ ಮಾಡಲಾದ ೪ ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ  ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿದರು. | Kannada Prabha

ಸಾರಾಂಶ

ವಿಜಯಪುರ: ಜೂನ್ ನಂತರ ಸರ್ಕಾರಿ ಶಾಲೆಗಳ ಪ್ರವೇಶ ದಾಖಲಾತಿಯಲ್ಲಿ ವಿಜಯಪುರ ನಗರ ಇತಿಹಾಸ ಸೃಷ್ಟಿಸುವಂತಾಗಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ವಾರ್ಡ್‌ ನಂ.೧೩ರಲ್ಲಿ ಬರುವ ಶಾಪೇಟೆ ಸರ್ಕಾರಿ ಕೆಬಿಎಸ್ ನಂ.೭ ಮತ್ತು ೮ ರಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ನೂತನವಾಗಿ ನಿರ್ಮಾಣ ಮಾಡಲಾದ ೪ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಕ್ಕಳ ಪ್ರವೇಶ ಆಗುತ್ತಿದೆ ಎಂಬ ಸಂದೇಶ ಇಡೀ ರಾಜ್ಯಕ್ಕೆ ಹೋಗುವ ರೀತಿಯಲ್ಲಿ, ನಮ್ಮ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ, ಅತ್ಯುತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮಾಡೋಣ, ಬಡವರು, ಶ್ರೀಮಂತರು ಎನ್ನದೇ, ಎಲ್ಲಾ ಮಕ್ಕಳು ಸಹ ನಮ್ಮ ಸರ್ಕಾರಿ ಶಾಲೆಗಳಿಗೆ ಪ್ರವೇಶಕ್ಕೆ ಕ್ಯೂ ನಿಲ್ಲಬೇಕು ಎಂದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜೂನ್ ನಂತರ ಸರ್ಕಾರಿ ಶಾಲೆಗಳ ಪ್ರವೇಶ ದಾಖಲಾತಿಯಲ್ಲಿ ವಿಜಯಪುರ ನಗರ ಇತಿಹಾಸ ಸೃಷ್ಟಿಸುವಂತಾಗಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ವಾರ್ಡ್‌ ನಂ.೧೩ರಲ್ಲಿ ಬರುವ ಶಾಪೇಟೆ ಸರ್ಕಾರಿ ಕೆಬಿಎಸ್ ನಂ.೭ ಮತ್ತು ೮ ರಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ನೂತನವಾಗಿ ನಿರ್ಮಾಣ ಮಾಡಲಾದ ೪ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಕ್ಕಳ ಪ್ರವೇಶ ಆಗುತ್ತಿದೆ ಎಂಬ ಸಂದೇಶ ಇಡೀ ರಾಜ್ಯಕ್ಕೆ ಹೋಗುವ ರೀತಿಯಲ್ಲಿ, ನಮ್ಮ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ, ಅತ್ಯುತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮಾಡೋಣ, ಬಡವರು, ಶ್ರೀಮಂತರು ಎನ್ನದೇ, ಎಲ್ಲಾ ಮಕ್ಕಳು ಸಹ ನಮ್ಮ ಸರ್ಕಾರಿ ಶಾಲೆಗಳಿಗೆ ಪ್ರವೇಶಕ್ಕೆ ಕ್ಯೂ ನಿಲ್ಲಬೇಕು ಎಂದರು.

ಈಗಾಗಲೇ ನಗರದ ಬಹುತೇಕ ಸರ್ಕಾರಿ ಶಾಲೆಗಳಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಉಳಿದಿರುವ ಶಾಲೆಗಳ ಶಿಥಿಲ ಕೊಠಡಿಗಳನ್ನು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತೆರವುಗೊಳಿಸಿ, ಮರು ನಿರ್ಮಾಣ ಮಾಡಲಾಗುವುದು. ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಸೇರಿದಂತೆ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸಲು, ಶಿಕ್ಷಣ ಇಲಾಖೆ ಜೊತೆಗೆ ತಾವು ಸದಾಸಿದ್ಧ ಎಂದು ಭರವಸೆ ನೀಡಿದರು.

ಮಹಾನಗರ ಪಾಲಿಕೆ ಸದಸ್ಯ ವಿಠ್ಠಲ ಹೊಸಪೇಟ, ಮುಖಂಡ ರಾಜೇಶ ದೇವಗಿರಿ, ಎಂ.ಎಂ.ಸಜ್ಜನ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ಎಸ್,ಡಿ.ಎಂಸಿ ಅಧ್ಯಕ್ಷ ಗುರಪ್ಪ ಕನ್ನೂರ ಸೇರಿದಂತೆ ಶಾಲೆ ಮುಖ್ಯೋಪಾಧ್ಯಾಯರು, ಶಿಕ್ಷಕರು, ಮಕ್ಕಳು ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌