ಕನ್ನಡಪ್ರಭ ವಾರ್ತೆ ನಾಪೋಕ್ಲು
ಅವರು ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಫೈನಲ್ ಪಂದ್ಯದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ಎ.ನಾಣಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ ಮಾತನಾಡಿ, 32 ಮಹಿಳಾ ಆಟಗಾರರು ಸೇರಿದಂತೆ ಐದು ವರ್ಷದ ಬಾಲಕ, 90 ವರ್ಷದ ಹಿರಿಯ ಕೌಟುಂಬಿಕ ಹಾಕಿಯಲ್ಲಿ ಪಾಲ್ಗೊಂಡಿದ್ದಾರೆ. ಮುಂದಿನ ವರ್ಷ 25ನೇ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಹಬ್ಬ ಮುದ್ದಂಡ ಕುಟುಂಬಸ್ಥರ ನೇತೃತ್ವದಲ್ಲಿ ಮಡಿಕೇರಿಯಲ್ಲಿ ನಡೆಯಲಿದೆ. ಇದು ಮತ್ತಷ್ಟು ವೈಭವಪೂರ್ಣವಾಗಿ ನಡೆಯಬೇಕು ಎಂದರು.
ಹಾಕಿ ಪಂದ್ಯಾವಳಿಯ ಸಂಚಾಲಕ ದಿನೇಶ್ ಕಾರ್ಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಯಾರಿಯರ್ ಗೈಡೆನ್ಸ್, ಫುಡ್ ಫೆಸ್ಟಿವಲ್, ಉಚಿತ ಆರೋಗ್ಯ ಕ್ಯಾಂಪ್, ಫ್ಯಾಮಿಲಿ ಮ್ಯಾರಾಥಾನ್, ಬೊಳಕಾಟ್ ತರಬೇತಿ, ಸಾಧಕರಿಗೆ ಸನ್ಮಾನ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ 23ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ಆಯೋಜಿಸಿದ್ದ ಅಪ್ಪಚೆಟ್ಟೋಳಂಡ ಕುಟುಂಬಸ್ಥರು 5 ಲಕ್ಷ ರು.ಗಳ ಚೆಕ್ ಅನ್ನು ಹಾಕಿ ಅಕಾಡೆಮಿಗೆ ಹಸ್ತಾಂತರಿಸಿದರು.ಲೇಖಕ ಅಲ್ಲಾರಂಡ ವಿಠಲ್ ನಂಜಪ್ಪ, ಕುಂಡ್ಯೋಳಂಡ ಕುಟುಂಬದ ಕುರಿತು ಬರೆದ ಪುಸ್ತಕವನ್ನು ಈ ಸಂದರ್ಭ ಲೋಕಾರ್ಪಣೆಗೊಳಿಸಲಾಯಿತು. ಕೊಡವ ಹಾಕಿ ಅಕಾಡೆಮಿಗೆ 5 ಎಕ್ರೆ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಹಾಗೂ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ ಕುಂಡ್ಯೋಳಂಡ ಕುಟುಂಬಸ್ಥರಿಗೆ ಒಡಿಕತ್ತಿಯನ್ನು ನೀಡುವುದರ ಮೂಲಕ ಹಾಕಿ ಅಕಾಡೆಮಿಯಿಂದ ಗೌರವ ಸಲ್ಲಿಸಲಾಯಿತು.