ಎಲೆಮರೆಯ ಸಾಧಕರನ್ನು ಗುರುತಿಸುವ ಕಾರ್ಯವಾಗಲಿ

KannadaprabhaNewsNetwork |  
Published : Nov 23, 2024, 12:31 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಗೌರವ | Kannada Prabha

ಸಾರಾಂಶ

ಮುಂಜಾನೆ ಗೆಳೆಯರ ಬಳಗದ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೇಹದಾರ್ಢ್ಯ ಪಟು ಶ್ರೀಹರಿ ಮತ್ತು ಹೈಜಂಪ್ ಕ್ರೀಡಾಳು ದರ್ಶನ್ ಹಾಗೂ ರಾಜೋತ್ಸವ ಪ್ರಶಸ್ತಿ ಪಡೆದ ವಿದ್ಯಾವಾಹಿನಿ ಪ್ರದೀಪಕುಮಾರ್ ಅವರನ್ನು ಅಭಿನಂದಿಸಲಾಯಿತು.

ಕನ್ನಡಪ್ರಭ ವಾರ್ತೆ, ತುಮಕೂರುನಗರದ ಮುಂಜಾನೆ ಗೆಳೆಯರ ಬಳಗದ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೇಹದಾರ್ಢ್ಯ ಪಟು ಶ್ರೀಹರಿ ಮತ್ತು ಹೈಜಂಪ್ ಕ್ರೀಡಾಳು ದರ್ಶನ್ ಹಾಗೂ ರಾಜೋತ್ಸವ ಪ್ರಶಸ್ತಿ ಪಡೆದ ವಿದ್ಯಾವಾಹಿನಿ ಪ್ರದೀಪಕುಮಾರ್ ಅವರನ್ನು ಅಭಿನಂದಿಸಲಾಯಿತು. ಇತ್ತೀಚೆಗೆ ಥೈಲಾಂಡ್‌ನಲ್ಲಿ ನಡೆದ ವಿಶ್ವ ದೇಹದಾರ್ಢ್ಯ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಕಂಚಿನ ಪದಕ ಪಡೆದ ಶ್ರೀಹರಿ, ರಾಜ್ಯಮಟ್ಟದ ಪಿಯು ಅಥ್ಲೆಟಿಕ್ಸ್ ಕ್ರೀಡಾಕೂಟದ ಹೈಜಂಪ್ ವಿಭಾಗದಲ್ಲಿ 1.91 ಮೀಟರ್ ಎತ್ತರ ಜಿಗಿದು ಚಿನ್ನದ ಪದಕವನ್ಬು ತನ್ನದಾಗಿಸಿಕೊಂಡ ಗ್ರಾಮೀಣ ಪ್ರತಿಭೆ ದರ್ಶನ್ ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿದ್ಯಾನಿಧಿ ಶಿಕ್ಷಣ ಸಂಸ್ಥೆಯ ಪ್ರದೀಪಕುಮಾರ್ ಅವರನ್ನು ಅಂತಾರಾಷ್ಟ್ರೀಯ ಕ್ರೀಡಾಪಟು ಟಿ.ಕೆ. ಆನಂದ್ ನೇತೃತ್ವದಲ್ಲಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್, ಹೊಸದುರ್ಗ ತಾಲೂಕಿನ ಒಂದು ಕುಗ್ರಾಮದಲ್ಲಿ ಹುಟ್ಟಿ ಸಮರ್ಪಕ ಪರಿಕರಗಳಿಲ್ಲದಿದ್ದರೂ ಹೈಜಂಪ್ ನಂತಹ ಕ್ರೀಡೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ರಾಷ್ಟ್ರಮಟ್ಟದ ಪಾಲ್ಗೊಳ್ಳಲು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಹಾಗೆಯೇ ಶ್ರೀಹರಿ ಕೂಡ ತನ್ನ ಸ್ವಂತ ಪರಿಶ್ರಮದಿಂದ ವಿಶ್ವ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದರು.ಕನ್ನಡಸೇನೆಯ ಅಧ್ಯಕ್ಷ ಧನಿಯಕುಮಾರ್ ಮಾತನಾಡಿ, ತುಮಕೂರು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿ ಸಹ ಹೆಸರು ಮಾಡುತ್ತಿದೆ. ಕಲ್ಪತರು ನಾಡು ಶಿಕ್ಷಣ ಕಾಶಿಯಾಗಿ ಬದಲಾಗುತ್ತಿದೆ. ಟಿ.ಕೆ.ಆನಂದ್ ರವರಂತಹ ಕ್ರೀಡಾಪಟುಗಳು ಎಲೆಮರೆಯ ಕಾಯಿಯಂತಹ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಇತರರು ಸಾಧನೆ ಮಾಡಲು ಪ್ರೇರಣೆ ನೀಡುತ್ತಿದ್ದಾರೆ ಎಂದರು.ಚೆಸ್ ಅಕಾಡೆಮಿ ರಾಜ್ಯಾಧ್ಯಕ್ಷ ಟಿ.ಎನ್.ಮಧುಕರ್ ಮಾತನಾಡಿ, ಟಿ.ಕೆ. ಆನಂದ್ ಅವರು ಒಂದು ರೀತಿ ಕ್ರೀಡಾ ರಾಯಭಾರಿಯಂತೆ. ಹಿರಿಯ, ಕಿರಿಯ ಕ್ರೀಡಾಪಟುಗಳನ್ನು ಬೆಸೆಯುವ ಕೆಲಸ ಮಾಡುತ್ತಿದ್ದಾರೆ. ಅಥ್ಲೆಟಿಕ್ಸ್ ದೈಹಿಕ ಶ್ರಮದ ಕ್ರೀಡೆಯಾದರೆ, ಚೆಸ್ ಮೈಂಡ್ ಗೇಮ್ ಆಗಿದೆ. ಮಕ್ಕಳು ಚೆಸ್ ಕಡೆ ಗಮನ ಹರಿಸಬೇಕು ಎಂದರು. ಸಮಾಜ ಸೇವಕ ಎಚ್.ಎನ್.ಚಂದ್ರಶೇಖರ್ ಮಾತನಾಡಿ, ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವುದು, ಮತ್ತಷ್ಟು ಜನರು ಸಾಧನೆ ಮಾಡಲು ಪ್ರೇರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಮುಂಜಾನೆ ಗೆಳೆಯರ ಬಳಗ ಮುಂಚೂಣಿಯಲ್ಲಿದೆ ಎಂದರು.ಅಭಿನಂದನೆ ಸ್ವೀಕರಿಸಿದ ಹೈಜಂಪ್ ಆಟಗಾರ ದರ್ಶನ್ ಮಾತನಾಡಿ, ಗ್ರಾಮೀಣ ಭಾಗದ ನನಗೆ ಅಭ್ಯಾಸಕ್ಕೆ ಸೂಕ್ತ ಜಾಗವಿಲ್ಲದಿದ್ದರೂ ನಿರಂತರ ಪರಿಶ್ರಮದ ಫಲವಾಗಿ ಇಂದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಒಲಂಪಿಕ್ಸ್‌ನಲ್ಲಿ ಸ್ವರ್ಧೆ ಮಾಡಿ ಪದಕ ಪಡೆಯಬೇಕೆಂಬ ಆಸೆಯಿದೆ. ಆ ನಿಟ್ಟಿನಲ್ಲಿ ಪ್ರಯತ್ನ ಮುಂದುವರೆಯಲಿದೆ ಎಂದರು. ದೇಹದಾರ್ಢ್ಯಪಟು ಶ್ರೀಹರಿ ಮಾತನಾಡಿ, ಒಂದೆಡೆ ಪಿಎಚ್‌ಡಿ ಪದವಿಗೆ ಅಭ್ಯಾಸದ ಜತೆಗೆ ವಿಶ್ವ ಚಾಂಪಿಯನ್ ಶಿಪ್‌ಗೆ ತಯಾರು ಆರಂಭಿಸಿದ್ದು, ಕಂಚಿನ ಪದಕ ಪಡೆದಿದ್ದೇನೆ. ಚಿನ್ನದ ಪದಕ ಪಡೆಯುವ ಗುರಿ ಇದೆ. ಸಾಧನೆಗೆ ಅಡ್ಡದಾರಿಗಳಿಲ್ಲ ಎಂಬುದಕ್ಕೆ ವಿಶ್ವ ದೇಹದಾರ್ಢ್ಯ ಸ್ವರ್ಧೆಯೇ ಉದಾಹರಣೆ ಎಂದು ಸ್ವರ್ಧೆಯ ವೇಳೆ ನಡೆದ ಘಟನೆಯನ್ನು ಉದಾಹರಿಸಿದರು.ಈ ಸಂದರ್ಭದಲ್ಲಿ ಕ್ರೀಡಾ ತರಬೇತುದಾರರಾದ ಶಿವಪ್ರಸಾದ್, ಮುಖಂಡರಾದ ನಟರಾಜಶೆಟ್ಟಿ, ವೆಂಕಟಾಚಲ, ರಮೇಶ್, ಬಾಲರಾಜ್, ಕೃಷ್ಣಮೂರ್ತಿ ಸೇರಿದಂತೆ ಮುಂಜಾನೆ ಗೆಳೆಯರ ಬಳಗದ ಪದಾಧಿಕಾರಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ