ಮಕ್ಕಳಲ್ಲಿ ಸಾಮಾಜಿಕ ಜ್ಞಾನ ಮೂಡಿಸುವ ಕೆಲಸವಾಗಲಿ: ನ್ಯೂ ಆಕ್ಸ್‌ಪರ್ಡ್ ಶಾಲೆಯ ಮುಖ್ಯಶಿಕ್ಷಕಿ ರಾಧ

KannadaprabhaNewsNetwork |  
Published : Feb 14, 2025, 12:36 AM IST
ಸೂಲಿಬೆಲೆ ನ್ಯೂ ಅಕ್ಸ್‌ಪರ್ಡ್ ಶಾಲೆಯ ವಿದ್ಯಾರ್ಥಿಗಳು ಸೂಲಿಬೆಲೆ ರೇಷ್ಮೆ ಬೆಳೆಗಾರರ ಸಹಕಾರ ಸಂಘಕ್ಕೆ ಬೇಟಿ ಕಾರ್ಯಚಟುವಟಿಕೆಗಳ ಅಧ್ಯಯನ ನೆಡೆಸಿದರು, ಬ್ಯಾಂಕ್ ಸಿಇಓ ಶ್ರೀನಿವಾಸಮೂರ್ತಿ, ಲೆಕ್ಕಿಗ ನಾಗೇಶ್, ಮುಖ್ಯಶಿಕ್ಷಕಿ ರಾಧ, ಇತರರು ಇದ್ದರು. | Kannada Prabha

ಸಾರಾಂಶ

೫ನೇ ತರಗತಿಯಿಂದ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಗ್ರಾಪಂ ಸೇವೆಗಳು ಹಾಗೂ ಅಂಚೆ ಕಚೇರಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಮಾಹಿತಿ ಹಾಗೂ ಅರಿವು ನೀಡಲಾಯಿತು.

ಕನ್ನಡಪ್ರಭ ವಾರ್ತೆ ಸೂಲಿಬೆಲೆ

ಶಾಲೆಯಲ್ಲಿ ನೀಡುವ ಪಠ್ಯ ಪುಸ್ತಕಗಳ ಜ್ಞಾನದ ಜೊತೆಗೆ ದಿನನಿತ್ಯದ ಸಾಮಾಜಿಕ ಚಟುವಟಿಕೆಗಳ ಅರಿವು ಮತ್ತು ಜ್ಞಾನ ಬಹಳ ಅವಶ್ಯ ಎಂದು ಸೂಲಿಬೆಲೆ ನ್ಯೂ ಆಕ್ಸ್‌ಪರ್ಡ್ ಶಾಲೆಯ ಮುಖ್ಯಶಿಕ್ಷಕಿ ರಾಧ ಹೇಳಿದರು.

ಸೂಲಿಬೆಲೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘಕ್ಕೆ ವಿದ್ಯಾರ್ಥಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳು ಹಾಗೂ ಬ್ಯಾಂಕಿನ ವ್ಯವಸ್ಥೆ, ಸಾಲ ಸೌಲಭ್ಯಗಳು ಮತ್ತು ವಸೂಲಾತಿಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಒದಗಿಸಲಾಯಿತು.

೫ನೇ ತರಗತಿಯಿಂದ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಗ್ರಾಪಂ ಸೇವೆಗಳು ಹಾಗೂ ಅಂಚೆ ಕಚೇರಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಮಾಹಿತಿ ಹಾಗೂ ಅರಿವು ನೀಡಲಾಯಿತು.

ಸೂಲಿಬೆಲೆ ಪೊಲೀಸ್ ಠಾಣೆಗೆ ಭೇಟಿ ನೀಡಿ ಕಾನೂನು ಕ್ರಮಗಳ ಬಗ್ಗೆ ಹಾಗೂ ಗ್ರಾಪಂ ಕಚೇರಿಗೆ ಭೇಟಿ ನೀಡಿ ಅಲ್ಲಿ ಸಾರ್ವಜನಿಕರಿಗೆ ಸಿಗುವ ಸೇವೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ, ಅಂಚೆ ಕಚೇರಿ, ಸೂಲಿಬೆಲೆ ಸಹಕಾರ ಬ್ಯಾಂಕ್‌ಗೆ ಭೇಟಿ ನೀಡಿ ರೈತರಿಗೆ ದೊರೆಯುವ ಸಾಲಗಳು ಹಾಗೂ ರಿಯಾಯಿತಿಗಳು ಸರ್ಕಾರದ ಸಹಾಯಧನ ಮತ್ತು ಪಡಿತರ ವಿತರಣೆ, ರಸಗೊಬ್ಬರ ವಿತರಣೆ ಸೇರಿ ರೈತಾಪಿ ವರ್ಗದ ಶ್ರೆಯೋಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ವಿವರಣೆ ಪಡೆಯಲಾಯಿತು.

ಶಾಲಾ ಅಧ್ಯಕ್ಷೆ ಸುಮಲತಾ ನಾಗೇಶ್, ಗ್ರಾಪಂ ಅಧ್ಯಕ್ಷ ಜನಾರ್ದನರೆಡ್ಡಿ, ಲೆಕ್ಕಿಗ ರಂಗಸ್ವಾಮಿ, ಸಹಕಾರ ಬ್ಯಾಂಕ್ ಸಿಇಒ ಶ್ರೀನಿವಾಸಮೂರ್ತಿ, ಲೆಕ್ಕಿಗ ಜಿ.ಎಂ.ನಾಗೇಶ್, ಲೀಲಾವತಿ, ಅನುಪಮ, ಭಾಗ್ಯ, ನಾರಾಯಣಸ್ವಾಮಿ, ಯಶಸ್ವಿನಿ, ಸಹನಾ, ವನುಜ, ಶಿಲ್ಪಾ, ನಾರಾಯಣಸ್ವಾಮಿ, ಸೌಮ್ಯ, ಗಗನ, ಲಕ್ಷ್ಮೀ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌