ಹುಬ್ಬಳ್ಳಿ: ಬಿಜೆಪಿ ನೂರು ಸೀಟ್ ಗೆಲ್ಲಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಕಳೆದ ಬಾರಿ ಕಾಂಗ್ರೆಸ್ ಎಷ್ಟು ಗೆದ್ದಿತ್ತೋ ಅಷ್ಟನ್ನು ಉಳಿಸಿಕೊಂಡು ಹೋದರೆ ಸಾಕು ಎಂದು ತಿರುಗೇಟು ನೀಡಿದರು.
ಸುದೀರ್ಘ ಎಪ್ಪತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶಕ್ಕೆ ಏನು ಕೊಡುಗೆ ನೀಡಿದೆ ಎಂಬುದನ್ನು ಸಚಿವ ಸಂತೋಷ ಲಾಡ್ ಅವರೇ ಹೇಳಬೇಕು ಎಂದು ಸವಾಲು ಹಾಕಿದ ಅವರು, ಬ್ರಿಟಿಷರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೇವೆ ಎಂದು ಹೇಳಿ 70 ವರ್ಷ ಅಧಿಕಾರ ನಡೆಸಿದರೆ, ಗರೀಬಿ ಹಠಾವೋ ಎಂದು ಹೇಳಿ ಇಂದಿರಾ ಗಾಂಧಿಯವರು 10-15 ವರ್ಷ ಅಧಿಕಾರ ನಡೆಸಿದ್ದಾರೆ. ಕೇವಲ ಅಧಿಕಾರ ಅನುಭವಿಸಿದ್ದು ಬಿಟ್ಟರೆ ದೇಶಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.
ನಮ್ಮ ಅವಧಿಯಲ್ಲಿ ಬಿಎಂಟಿಸಿಗೆ 1,311 ಮತ್ತು ಕೆಎಸ್ಆರ್ಟಿಸಿಗೆ 50 ಪವರ್ ಪ್ಲಸ್ ಬಸ್ಗಳು ಹಾಗೂ 20 ವೋಲ್ವೋ ಬಸ್ಗಳನ್ನು ಖರೀದಿಸಿದ್ದು, ಅವು ಕಾರ್ಯಾಚರಣೆ ಆರಂಭಿಸಿದ್ದವು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ಮೀಸಲಿಟ್ಟು, ಈಗಾಗಲೇ 5,468 ಕಾಮಗಾರಿಗಳಿಗೆ ಕ್ರಿಯಾಯೋಜನೆ ಮಂಜೂರಿಗೊಳಿಸಿ ನವೆಂಬರ್ ಹೊತ್ತಿಗೆ 1,287 ಕಾಮಗಾರಿ ಪೂರ್ಣಗೊಂಡಿವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ನಮ್ಮ ಕಾಲದಲ್ಲಿ ಅನುಮೋದನೆಗೊಂಡ ಯೋಜನೆಗಳನ್ನು ತಮ್ಮ ಸಾಧನೆ ಅಂಥ ಹೇಳಿಕೊಂಡಿದ್ದಾರೆ ಎಂದು ಆರೋಪಿಸಿದರು.ಎಲ್ಲವೂ ಸರಿಯಾಗುತ್ತದೆ