ಕನ್ನಡಪ್ರಭ ವಾರ್ತೆ ಬಳ್ಳಾರಿ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಹಾಗೂ ಪ್ರದರ್ಶನ ಕಲೆಯ ನಾಟಕ ವಿಭಾಗದ ಸಹಯೋಗದಲ್ಲಿ ಏರ್ಪಡಿಸಿದ್ದ ಕನ್ನಡ ಭಾಷೆಯ ಏಳುಬೀಳುಗಳ ಸವಾಲುಗಳು ಮತ್ತು ಸಾಹಿತ್ಯದ ಸಾಂದರ್ಭಿಕ ಸವಾಲುಗಳು ಎಂಬ ವಿಷಯಗಳ ಮೇಲೆ ಆಯೋಜಿಸಿದ್ದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.
ಕನ್ನಡ ಸಾಹಿತ್ಯ, ಭಾಷೆ, ಪ್ರಾಂತ್ಯವಾರು ಪ್ರಾದೇಶಿಕ ವೈಶಿಷ್ಟ್ಯಗಳಿಂದ ತನ್ನದೇ ಆದ ಗಟ್ಟಿತನ ಒಳಗೊಂಡಿರುವುದರಿಂದ ಇಂದಿಗೂ ಕನ್ನಡ ಭಾಷೆ ನಿರಂತರವಾಗಿ ಮುಂದುವರಿಯುತ್ತಿದೆ. ಗಡಿಭಾಗದ ಭಾಷೆಗಳಲ್ಲಿ ದ್ವಿ ಭಾಷೆ ಪದ್ಧತಿಯನ್ನು ಅಳವಡಿಸಿಕೊಂಡು ಜನಸಾಮಾನ್ಯರ ದಿನನಿತ್ಯದ ಬದುಕಿಗೆ ಆಧಾರವಾಗಿರುವ ಭಾಷೆ ತಮ್ಮದೇ ಆದ ಅಸ್ತಿತ್ವಗಳೊಂದಿಗೆ ಉಳಿದುಕೊಂಡು ಬರುತ್ತಿವೆ ಎಂದರು.ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಹಿತ್ತಿಕವಾಗಿ ಕೊಡುಕೊಳ್ಳುವಿಕೆಗಳು ಆರಂಭಗೊಂಡು ಹೊಸ ಸಂವೇದನೆಯು ಹರಿಯತೊಡಗಿದವು ಎಂದರಲ್ಲದೇ ಕನ್ನಡ ಸಾಹಿತ್ಯದ ಸಾಂದರ್ಭಿಕ ಸವಾಲುಗಳ ಕಣ್ಣ ಮುಂದೆ ಸಾಲುಗಟ್ಟಿ ನಿಂತಿವೆ ಎಂದರು.
ಈ ಸಂದರ್ಭದಲ್ಲಿ ಪ್ರದರ್ಶನ ಕಲೆ ನಾಟಕ ವಿಭಾಗದ ಮುಖ್ಯಸ್ಥ ಪ್ರೊ. ಎನ್. ಶಾಂತನಾಯಕ್, ಆರನಕಟ್ಟೆ ಡಾ. ರಂಗನಾಥ್, ಡಾ. ವಾತ್ಸಲ್ಯ, ಡಾ. ಸಂತೋಷ್ ಕುಮಾರ್, ಡಾ. ಅಣ್ಣಾಜಿ ಕೃಷ್ಣಾರೆಡ್ಡಿ, ಡಾ. ಶಿವಪ್ರಕಾಶ್, ಡಾ. ಸಹನಾ ಪಿಂಜಾರ್, ಡಾ. ಶಕೀಲ ಸೇರಿದಂತೆ ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.